Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಸಂಶೋಧನೆ- ಅಧ್ಯಯನ-ಪರಿಹಾರ | ಕೃಷಿಕರಿಂದ ಹೆಚ್ಚಿದ ಒತ್ತಡ |

Share

ಅಡಿಕೆ ಹಳದಿ ಎಲೆರೋಗ (Arecanut Yellow Leaf Disease )ವಿಸ್ತರಣೆಯಾಗುತ್ತಿದೆ. ಹೀಗಾಗಿ ಕೃಷಿಕರ ಆತಂಕ ಹೆಚ್ಚಾಗುತ್ತಿದೆ. ಶೃಂಗೇರಿ, ಕೊಪ್ಪ, ಸಂಪಾಜೆಯಲ್ಲಿ ಮಾತ್ರವೇ ಇದ್ದ ಹಳದಿ ಎಲೆರೋಗ ಈಗ ವಿಸ್ತರಣೆಯಾಗುತ್ತಲೇ ಇದೆ. ಈ ಕಾರಣದಿಂದ ಸರ್ಕಾರ ಹಾಗೂ ಸಂಸ್ಥೆಗಳು ಈ ಬಗ್ಗೆ ಸರಿಯಾದ ಸಂಶೋಧನೆ , ಅಧ್ಯಯನ ಹಾಗೂ ಪರಿಹಾರ ಮಾರ್ಗಗಳ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಲು ಕೃಷಿಕರಿಂದಲೇ ಒತ್ತಡ ಹೆಚ್ಚಿದೆ.

ಅಡಿಕೆ ಹಳದಿ ಎಲೆರೋಗದ ಸಂಶೋಧನೆ ಅನೇಕ ಸಮಯಗಳಿಂದ ಸಿಪಿಸಿಆರ್‌ ಐ ವಿಜ್ಞಾನಿಗಳು ಹಾಗೂ ಇತರ ವಿಜ್ಞಾನಿಗಳು ನಡೆಸುತ್ತಿದ್ದರೂ ಇಂದಿಗೂ ಸರಿಯಾದ ಕಾರಣ ತಿಳಿದಿಲ್ಲ. ಸಿಪಿಸಿಆರ್‌ ಐ ವಿಜ್ಞಾನಿಗಳು ಫೈಟೋಪ್ಲಾಸ್ಮಾ ಎಂಬ ವೈರಸ್‌ ಕಾರಣ ಎಂದು ಈ ನೆಲೆಯಲ್ಲಿ ಅಧ್ಯಯನ ಮುಂದುವರಿಸುತ್ತಾ, ಈಗ ರೋಗ ನಿರೋಧಕ ತಳಿಯ ಅಭಿವೃದ್ಧಿ ಕಡೆಗೆ ಗಮನಹರಿಸಿದ್ದಾರೆ. ಇದೇ ವೇಳೆ ಫೈಟೋಪ್ಲಾಸ್ಮಾ ಕಾರಣವಲ್ಲ ಅದಕ್ಕೆ ಬೇರೆಯೇ ಕಾರಣ ಎಂಬ ಇನ್ನೊಂದು ವಾದವೂ ಇದೆ. ಹೀಗಾಗಿ  ಅಡಿಕೆ ಹಳದಿ ಎಲೆರೋಗ ಆರಂಭವಾಗಿ ಸುಮಾರು 60 ವರ್ಷ ಕಳೆದರೂ ಸರಿಯಾದ ಒಮ್ಮತದ ನಿರ್ಧಾರಗಳು ಸಾಧ್ಯವಾಗಿಲ್ಲ.

ಇದೀಗ ಕೃಷಿಕರು ಹಳದಿ ಎಲೆರೋಗಕ್ಕೆ ಸೂಕ್ತ ಪರಿಹಾರ ಹಾಗೂ ಅಧ್ಯಯನ ನಡೆಸಲು ಒತ್ತಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಒತ್ತಾಯ ಮಾಡುವುದರ ಜೊತೆಗೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮೂಲಕವೂ ಒತ್ತಾಯ ಮಾಡಲು ಆರಂಭಿಸಿದ್ದಾರೆ. ಕಳೆದ ವರ್ಷದ ಕ್ಯಾಂಪ್ಕೋ ಮಹಾಸಭೆಯಲ್ಲಿ ಅಡಿಕೆ ಹಳೆದಿ ಎಲೆರೋಗದ ಬಗ್ಗೆ ಪ್ರಸ್ತಾಪವಾಗಿದ್ದರೂ ಯಾವುದೇ ಗಮನಾರ್ಹವಾದ ಬೆಳವಣಿಗೆಯಾಗಿರಲಿಲ್ಲ. ಈ ಬಾರಿ ಮತ್ತೆ ಕೃಷಿಕರು ಸಂಘಟಿತರಾಗಿ ಕ್ಯಾಂಪ್ಕೋ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಕ್ಯಾಂಪ್ಕೋ ಮೂಲಕವೇ ಆರಂಭವಾದ ಸಂಶೋಧನಾ ವಿಭಾಗವನ್ನು ಬಲಗೊಳಿಸುವುದು ಹಾಗೂ ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಸಂಸ್ಥೆಯಾದ ಸಿಪಿಸಿಆರ್‌ಐ ಗೆ ನೆರವು ನೀಡಬೇಕು ಎನ್ನುವ ಒತ್ತಾಯ ಆರಂಭವಾಗಿದೆ.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವೂ ಅಡಿಕೆ ಹಳದಿ ರೋಗದ ಹಿನ್ನೆಲೆಯಲ್ಲಿ ಕಳೆದ ಬಾರಿಯ ಕ್ಯಾಂಪ್ಕೋ ಮಹಾಸಭೆಯಲ್ಲೂ ವಿಷಯ ಪ್ರಸ್ತಾಪಿಸಿತ್ತು. ಈ ಬಾರಿ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಸೂಕ್ತ ನೆರವು ನೀಡಲು ಒತ್ತಾಯಿಸಲಿದೆ. ಅದರ ಜೊತೆಗೆ ಅಡಿಕೆ ಬೆಳೆಗಾರರ ಸಂಘವು ಸರ್ಕಾರವನ್ನೂ ಒತ್ತಾಯಿಸಿದೆ. ಹಳದಿ ಎಲೆರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನೂ ಸರ್ಕಾರದ ಗಮನಕ್ಕೆ ತಂದಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹೇಳಿದ್ದಾರೆ.

ಅಡಿಕೆ ಹಳದಿ ಎಲೆರೋಗ ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಸೂಕ್ತವಾದ ಕ್ರಮಗಳು ಅನಿವಾರ್ಯವಾಗಿದೆ. ಈ ಕಾರಣದಿಂದ ಕೃಷಿಕರ ಸಂಸ್ಥೆಯಾದ ಕ್ಯಾಂಪ್ಕೋ ಸಹಿತ ಎಲ್ಲಾ ಸಹಕಾರಿ ಸಂಸ್ಥೆಗಳು ಮತ್ತು ಸರ್ಕಾರವು ಕೂಡಾ ಪರಿಹಾರ ಮಾರ್ಗದ ಕಡೆಗೆ ನೆರವು ನೀಡಬೇಕಿದೆ ಎಂದು ಕೃಷಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

20 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

22 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

22 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

1 day ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

1 day ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

2 days ago