Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಸಂಶೋಧನೆ- ಅಧ್ಯಯನ-ಪರಿಹಾರ | ಕೃಷಿಕರಿಂದ ಹೆಚ್ಚಿದ ಒತ್ತಡ |

Share

ಅಡಿಕೆ ಹಳದಿ ಎಲೆರೋಗ (Arecanut Yellow Leaf Disease )ವಿಸ್ತರಣೆಯಾಗುತ್ತಿದೆ. ಹೀಗಾಗಿ ಕೃಷಿಕರ ಆತಂಕ ಹೆಚ್ಚಾಗುತ್ತಿದೆ. ಶೃಂಗೇರಿ, ಕೊಪ್ಪ, ಸಂಪಾಜೆಯಲ್ಲಿ ಮಾತ್ರವೇ ಇದ್ದ ಹಳದಿ ಎಲೆರೋಗ ಈಗ ವಿಸ್ತರಣೆಯಾಗುತ್ತಲೇ ಇದೆ. ಈ ಕಾರಣದಿಂದ ಸರ್ಕಾರ ಹಾಗೂ ಸಂಸ್ಥೆಗಳು ಈ ಬಗ್ಗೆ ಸರಿಯಾದ ಸಂಶೋಧನೆ , ಅಧ್ಯಯನ ಹಾಗೂ ಪರಿಹಾರ ಮಾರ್ಗಗಳ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಲು ಕೃಷಿಕರಿಂದಲೇ ಒತ್ತಡ ಹೆಚ್ಚಿದೆ.

ಅಡಿಕೆ ಹಳದಿ ಎಲೆರೋಗದ ಸಂಶೋಧನೆ ಅನೇಕ ಸಮಯಗಳಿಂದ ಸಿಪಿಸಿಆರ್‌ ಐ ವಿಜ್ಞಾನಿಗಳು ಹಾಗೂ ಇತರ ವಿಜ್ಞಾನಿಗಳು ನಡೆಸುತ್ತಿದ್ದರೂ ಇಂದಿಗೂ ಸರಿಯಾದ ಕಾರಣ ತಿಳಿದಿಲ್ಲ. ಸಿಪಿಸಿಆರ್‌ ಐ ವಿಜ್ಞಾನಿಗಳು ಫೈಟೋಪ್ಲಾಸ್ಮಾ ಎಂಬ ವೈರಸ್‌ ಕಾರಣ ಎಂದು ಈ ನೆಲೆಯಲ್ಲಿ ಅಧ್ಯಯನ ಮುಂದುವರಿಸುತ್ತಾ, ಈಗ ರೋಗ ನಿರೋಧಕ ತಳಿಯ ಅಭಿವೃದ್ಧಿ ಕಡೆಗೆ ಗಮನಹರಿಸಿದ್ದಾರೆ. ಇದೇ ವೇಳೆ ಫೈಟೋಪ್ಲಾಸ್ಮಾ ಕಾರಣವಲ್ಲ ಅದಕ್ಕೆ ಬೇರೆಯೇ ಕಾರಣ ಎಂಬ ಇನ್ನೊಂದು ವಾದವೂ ಇದೆ. ಹೀಗಾಗಿ  ಅಡಿಕೆ ಹಳದಿ ಎಲೆರೋಗ ಆರಂಭವಾಗಿ ಸುಮಾರು 60 ವರ್ಷ ಕಳೆದರೂ ಸರಿಯಾದ ಒಮ್ಮತದ ನಿರ್ಧಾರಗಳು ಸಾಧ್ಯವಾಗಿಲ್ಲ.

ಇದೀಗ ಕೃಷಿಕರು ಹಳದಿ ಎಲೆರೋಗಕ್ಕೆ ಸೂಕ್ತ ಪರಿಹಾರ ಹಾಗೂ ಅಧ್ಯಯನ ನಡೆಸಲು ಒತ್ತಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಒತ್ತಾಯ ಮಾಡುವುದರ ಜೊತೆಗೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮೂಲಕವೂ ಒತ್ತಾಯ ಮಾಡಲು ಆರಂಭಿಸಿದ್ದಾರೆ. ಕಳೆದ ವರ್ಷದ ಕ್ಯಾಂಪ್ಕೋ ಮಹಾಸಭೆಯಲ್ಲಿ ಅಡಿಕೆ ಹಳೆದಿ ಎಲೆರೋಗದ ಬಗ್ಗೆ ಪ್ರಸ್ತಾಪವಾಗಿದ್ದರೂ ಯಾವುದೇ ಗಮನಾರ್ಹವಾದ ಬೆಳವಣಿಗೆಯಾಗಿರಲಿಲ್ಲ. ಈ ಬಾರಿ ಮತ್ತೆ ಕೃಷಿಕರು ಸಂಘಟಿತರಾಗಿ ಕ್ಯಾಂಪ್ಕೋ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಕ್ಯಾಂಪ್ಕೋ ಮೂಲಕವೇ ಆರಂಭವಾದ ಸಂಶೋಧನಾ ವಿಭಾಗವನ್ನು ಬಲಗೊಳಿಸುವುದು ಹಾಗೂ ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಸಂಸ್ಥೆಯಾದ ಸಿಪಿಸಿಆರ್‌ಐ ಗೆ ನೆರವು ನೀಡಬೇಕು ಎನ್ನುವ ಒತ್ತಾಯ ಆರಂಭವಾಗಿದೆ.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವೂ ಅಡಿಕೆ ಹಳದಿ ರೋಗದ ಹಿನ್ನೆಲೆಯಲ್ಲಿ ಕಳೆದ ಬಾರಿಯ ಕ್ಯಾಂಪ್ಕೋ ಮಹಾಸಭೆಯಲ್ಲೂ ವಿಷಯ ಪ್ರಸ್ತಾಪಿಸಿತ್ತು. ಈ ಬಾರಿ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಸೂಕ್ತ ನೆರವು ನೀಡಲು ಒತ್ತಾಯಿಸಲಿದೆ. ಅದರ ಜೊತೆಗೆ ಅಡಿಕೆ ಬೆಳೆಗಾರರ ಸಂಘವು ಸರ್ಕಾರವನ್ನೂ ಒತ್ತಾಯಿಸಿದೆ. ಹಳದಿ ಎಲೆರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನೂ ಸರ್ಕಾರದ ಗಮನಕ್ಕೆ ತಂದಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹೇಳಿದ್ದಾರೆ.

ಅಡಿಕೆ ಹಳದಿ ಎಲೆರೋಗ ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಸೂಕ್ತವಾದ ಕ್ರಮಗಳು ಅನಿವಾರ್ಯವಾಗಿದೆ. ಈ ಕಾರಣದಿಂದ ಕೃಷಿಕರ ಸಂಸ್ಥೆಯಾದ ಕ್ಯಾಂಪ್ಕೋ ಸಹಿತ ಎಲ್ಲಾ ಸಹಕಾರಿ ಸಂಸ್ಥೆಗಳು ಮತ್ತು ಸರ್ಕಾರವು ಕೂಡಾ ಪರಿಹಾರ ಮಾರ್ಗದ ಕಡೆಗೆ ನೆರವು ನೀಡಬೇಕಿದೆ ಎಂದು ಕೃಷಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

2 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

3 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

4 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

4 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

4 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

7 hours ago