Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಸಂಶೋಧನೆ- ಅಧ್ಯಯನ-ಪರಿಹಾರ | ಕೃಷಿಕರಿಂದ ಹೆಚ್ಚಿದ ಒತ್ತಡ |

Share

ಅಡಿಕೆ ಹಳದಿ ಎಲೆರೋಗ (Arecanut Yellow Leaf Disease )ವಿಸ್ತರಣೆಯಾಗುತ್ತಿದೆ. ಹೀಗಾಗಿ ಕೃಷಿಕರ ಆತಂಕ ಹೆಚ್ಚಾಗುತ್ತಿದೆ. ಶೃಂಗೇರಿ, ಕೊಪ್ಪ, ಸಂಪಾಜೆಯಲ್ಲಿ ಮಾತ್ರವೇ ಇದ್ದ ಹಳದಿ ಎಲೆರೋಗ ಈಗ ವಿಸ್ತರಣೆಯಾಗುತ್ತಲೇ ಇದೆ. ಈ ಕಾರಣದಿಂದ ಸರ್ಕಾರ ಹಾಗೂ ಸಂಸ್ಥೆಗಳು ಈ ಬಗ್ಗೆ ಸರಿಯಾದ ಸಂಶೋಧನೆ , ಅಧ್ಯಯನ ಹಾಗೂ ಪರಿಹಾರ ಮಾರ್ಗಗಳ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಲು ಕೃಷಿಕರಿಂದಲೇ ಒತ್ತಡ ಹೆಚ್ಚಿದೆ.

ಅಡಿಕೆ ಹಳದಿ ಎಲೆರೋಗದ ಸಂಶೋಧನೆ ಅನೇಕ ಸಮಯಗಳಿಂದ ಸಿಪಿಸಿಆರ್‌ ಐ ವಿಜ್ಞಾನಿಗಳು ಹಾಗೂ ಇತರ ವಿಜ್ಞಾನಿಗಳು ನಡೆಸುತ್ತಿದ್ದರೂ ಇಂದಿಗೂ ಸರಿಯಾದ ಕಾರಣ ತಿಳಿದಿಲ್ಲ. ಸಿಪಿಸಿಆರ್‌ ಐ ವಿಜ್ಞಾನಿಗಳು ಫೈಟೋಪ್ಲಾಸ್ಮಾ ಎಂಬ ವೈರಸ್‌ ಕಾರಣ ಎಂದು ಈ ನೆಲೆಯಲ್ಲಿ ಅಧ್ಯಯನ ಮುಂದುವರಿಸುತ್ತಾ, ಈಗ ರೋಗ ನಿರೋಧಕ ತಳಿಯ ಅಭಿವೃದ್ಧಿ ಕಡೆಗೆ ಗಮನಹರಿಸಿದ್ದಾರೆ. ಇದೇ ವೇಳೆ ಫೈಟೋಪ್ಲಾಸ್ಮಾ ಕಾರಣವಲ್ಲ ಅದಕ್ಕೆ ಬೇರೆಯೇ ಕಾರಣ ಎಂಬ ಇನ್ನೊಂದು ವಾದವೂ ಇದೆ. ಹೀಗಾಗಿ  ಅಡಿಕೆ ಹಳದಿ ಎಲೆರೋಗ ಆರಂಭವಾಗಿ ಸುಮಾರು 60 ವರ್ಷ ಕಳೆದರೂ ಸರಿಯಾದ ಒಮ್ಮತದ ನಿರ್ಧಾರಗಳು ಸಾಧ್ಯವಾಗಿಲ್ಲ.

ಇದೀಗ ಕೃಷಿಕರು ಹಳದಿ ಎಲೆರೋಗಕ್ಕೆ ಸೂಕ್ತ ಪರಿಹಾರ ಹಾಗೂ ಅಧ್ಯಯನ ನಡೆಸಲು ಒತ್ತಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಒತ್ತಾಯ ಮಾಡುವುದರ ಜೊತೆಗೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮೂಲಕವೂ ಒತ್ತಾಯ ಮಾಡಲು ಆರಂಭಿಸಿದ್ದಾರೆ. ಕಳೆದ ವರ್ಷದ ಕ್ಯಾಂಪ್ಕೋ ಮಹಾಸಭೆಯಲ್ಲಿ ಅಡಿಕೆ ಹಳೆದಿ ಎಲೆರೋಗದ ಬಗ್ಗೆ ಪ್ರಸ್ತಾಪವಾಗಿದ್ದರೂ ಯಾವುದೇ ಗಮನಾರ್ಹವಾದ ಬೆಳವಣಿಗೆಯಾಗಿರಲಿಲ್ಲ. ಈ ಬಾರಿ ಮತ್ತೆ ಕೃಷಿಕರು ಸಂಘಟಿತರಾಗಿ ಕ್ಯಾಂಪ್ಕೋ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಕ್ಯಾಂಪ್ಕೋ ಮೂಲಕವೇ ಆರಂಭವಾದ ಸಂಶೋಧನಾ ವಿಭಾಗವನ್ನು ಬಲಗೊಳಿಸುವುದು ಹಾಗೂ ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಸಂಸ್ಥೆಯಾದ ಸಿಪಿಸಿಆರ್‌ಐ ಗೆ ನೆರವು ನೀಡಬೇಕು ಎನ್ನುವ ಒತ್ತಾಯ ಆರಂಭವಾಗಿದೆ.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವೂ ಅಡಿಕೆ ಹಳದಿ ರೋಗದ ಹಿನ್ನೆಲೆಯಲ್ಲಿ ಕಳೆದ ಬಾರಿಯ ಕ್ಯಾಂಪ್ಕೋ ಮಹಾಸಭೆಯಲ್ಲೂ ವಿಷಯ ಪ್ರಸ್ತಾಪಿಸಿತ್ತು. ಈ ಬಾರಿ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಸೂಕ್ತ ನೆರವು ನೀಡಲು ಒತ್ತಾಯಿಸಲಿದೆ. ಅದರ ಜೊತೆಗೆ ಅಡಿಕೆ ಬೆಳೆಗಾರರ ಸಂಘವು ಸರ್ಕಾರವನ್ನೂ ಒತ್ತಾಯಿಸಿದೆ. ಹಳದಿ ಎಲೆರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನೂ ಸರ್ಕಾರದ ಗಮನಕ್ಕೆ ತಂದಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹೇಳಿದ್ದಾರೆ.

ಅಡಿಕೆ ಹಳದಿ ಎಲೆರೋಗ ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಸೂಕ್ತವಾದ ಕ್ರಮಗಳು ಅನಿವಾರ್ಯವಾಗಿದೆ. ಈ ಕಾರಣದಿಂದ ಕೃಷಿಕರ ಸಂಸ್ಥೆಯಾದ ಕ್ಯಾಂಪ್ಕೋ ಸಹಿತ ಎಲ್ಲಾ ಸಹಕಾರಿ ಸಂಸ್ಥೆಗಳು ಮತ್ತು ಸರ್ಕಾರವು ಕೂಡಾ ಪರಿಹಾರ ಮಾರ್ಗದ ಕಡೆಗೆ ನೆರವು ನೀಡಬೇಕಿದೆ ಎಂದು ಕೃಷಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 hour ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

3 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

9 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

10 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

17 hours ago

ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ

ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…

1 day ago