Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಸಂಶೋಧನೆ- ಅಧ್ಯಯನ-ಪರಿಹಾರ | ಕೃಷಿಕರಿಂದ ಹೆಚ್ಚಿದ ಒತ್ತಡ |

Share

ಅಡಿಕೆ ಹಳದಿ ಎಲೆರೋಗ (Arecanut Yellow Leaf Disease )ವಿಸ್ತರಣೆಯಾಗುತ್ತಿದೆ. ಹೀಗಾಗಿ ಕೃಷಿಕರ ಆತಂಕ ಹೆಚ್ಚಾಗುತ್ತಿದೆ. ಶೃಂಗೇರಿ, ಕೊಪ್ಪ, ಸಂಪಾಜೆಯಲ್ಲಿ ಮಾತ್ರವೇ ಇದ್ದ ಹಳದಿ ಎಲೆರೋಗ ಈಗ ವಿಸ್ತರಣೆಯಾಗುತ್ತಲೇ ಇದೆ. ಈ ಕಾರಣದಿಂದ ಸರ್ಕಾರ ಹಾಗೂ ಸಂಸ್ಥೆಗಳು ಈ ಬಗ್ಗೆ ಸರಿಯಾದ ಸಂಶೋಧನೆ , ಅಧ್ಯಯನ ಹಾಗೂ ಪರಿಹಾರ ಮಾರ್ಗಗಳ ಬಗ್ಗೆ ತಕ್ಷಣವೇ ಕ್ರಮ ಕೈಗೊಳ್ಳಲು ಕೃಷಿಕರಿಂದಲೇ ಒತ್ತಡ ಹೆಚ್ಚಿದೆ.

ಅಡಿಕೆ ಹಳದಿ ಎಲೆರೋಗದ ಸಂಶೋಧನೆ ಅನೇಕ ಸಮಯಗಳಿಂದ ಸಿಪಿಸಿಆರ್‌ ಐ ವಿಜ್ಞಾನಿಗಳು ಹಾಗೂ ಇತರ ವಿಜ್ಞಾನಿಗಳು ನಡೆಸುತ್ತಿದ್ದರೂ ಇಂದಿಗೂ ಸರಿಯಾದ ಕಾರಣ ತಿಳಿದಿಲ್ಲ. ಸಿಪಿಸಿಆರ್‌ ಐ ವಿಜ್ಞಾನಿಗಳು ಫೈಟೋಪ್ಲಾಸ್ಮಾ ಎಂಬ ವೈರಸ್‌ ಕಾರಣ ಎಂದು ಈ ನೆಲೆಯಲ್ಲಿ ಅಧ್ಯಯನ ಮುಂದುವರಿಸುತ್ತಾ, ಈಗ ರೋಗ ನಿರೋಧಕ ತಳಿಯ ಅಭಿವೃದ್ಧಿ ಕಡೆಗೆ ಗಮನಹರಿಸಿದ್ದಾರೆ. ಇದೇ ವೇಳೆ ಫೈಟೋಪ್ಲಾಸ್ಮಾ ಕಾರಣವಲ್ಲ ಅದಕ್ಕೆ ಬೇರೆಯೇ ಕಾರಣ ಎಂಬ ಇನ್ನೊಂದು ವಾದವೂ ಇದೆ. ಹೀಗಾಗಿ  ಅಡಿಕೆ ಹಳದಿ ಎಲೆರೋಗ ಆರಂಭವಾಗಿ ಸುಮಾರು 60 ವರ್ಷ ಕಳೆದರೂ ಸರಿಯಾದ ಒಮ್ಮತದ ನಿರ್ಧಾರಗಳು ಸಾಧ್ಯವಾಗಿಲ್ಲ.

ಇದೀಗ ಕೃಷಿಕರು ಹಳದಿ ಎಲೆರೋಗಕ್ಕೆ ಸೂಕ್ತ ಪರಿಹಾರ ಹಾಗೂ ಅಧ್ಯಯನ ನಡೆಸಲು ಒತ್ತಾಯ ಮಾಡುತ್ತಿದ್ದಾರೆ. ಸರ್ಕಾರಕ್ಕೆ ಒತ್ತಾಯ ಮಾಡುವುದರ ಜೊತೆಗೆ ಸಹಕಾರಿ ಸಂಸ್ಥೆ ಕ್ಯಾಂಪ್ಕೋ ಮೂಲಕವೂ ಒತ್ತಾಯ ಮಾಡಲು ಆರಂಭಿಸಿದ್ದಾರೆ. ಕಳೆದ ವರ್ಷದ ಕ್ಯಾಂಪ್ಕೋ ಮಹಾಸಭೆಯಲ್ಲಿ ಅಡಿಕೆ ಹಳೆದಿ ಎಲೆರೋಗದ ಬಗ್ಗೆ ಪ್ರಸ್ತಾಪವಾಗಿದ್ದರೂ ಯಾವುದೇ ಗಮನಾರ್ಹವಾದ ಬೆಳವಣಿಗೆಯಾಗಿರಲಿಲ್ಲ. ಈ ಬಾರಿ ಮತ್ತೆ ಕೃಷಿಕರು ಸಂಘಟಿತರಾಗಿ ಕ್ಯಾಂಪ್ಕೋ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕು. ಕ್ಯಾಂಪ್ಕೋ ಮೂಲಕವೇ ಆರಂಭವಾದ ಸಂಶೋಧನಾ ವಿಭಾಗವನ್ನು ಬಲಗೊಳಿಸುವುದು ಹಾಗೂ ಈ ಮೂಲಕ ಕೇಂದ್ರ ಸರ್ಕಾರದ ಕೃಷಿ ಸಂಸ್ಥೆಯಾದ ಸಿಪಿಸಿಆರ್‌ಐ ಗೆ ನೆರವು ನೀಡಬೇಕು ಎನ್ನುವ ಒತ್ತಾಯ ಆರಂಭವಾಗಿದೆ.

ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವೂ ಅಡಿಕೆ ಹಳದಿ ರೋಗದ ಹಿನ್ನೆಲೆಯಲ್ಲಿ ಕಳೆದ ಬಾರಿಯ ಕ್ಯಾಂಪ್ಕೋ ಮಹಾಸಭೆಯಲ್ಲೂ ವಿಷಯ ಪ್ರಸ್ತಾಪಿಸಿತ್ತು. ಈ ಬಾರಿ ಕೂಡಾ ಅಡಿಕೆ ಹಳದಿ ಎಲೆರೋಗದ ಬಗ್ಗೆ ಸೂಕ್ತ ನೆರವು ನೀಡಲು ಒತ್ತಾಯಿಸಲಿದೆ. ಅದರ ಜೊತೆಗೆ ಅಡಿಕೆ ಬೆಳೆಗಾರರ ಸಂಘವು ಸರ್ಕಾರವನ್ನೂ ಒತ್ತಾಯಿಸಿದೆ. ಹಳದಿ ಎಲೆರೋಗ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವಾಸ್ತವ ಸ್ಥಿತಿಯನ್ನೂ ಸರ್ಕಾರದ ಗಮನಕ್ಕೆ ತಂದಿದೆ ಎಂದು ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಅಶೋಕ್‌ ಕಿನಿಲ ಹೇಳಿದ್ದಾರೆ.

ಅಡಿಕೆ ಹಳದಿ ಎಲೆರೋಗ ವ್ಯಾಪಕವಾಗುತ್ತಿರುವ ಈ ಸಂದರ್ಭದಲ್ಲಿ ಸೂಕ್ತವಾದ ಕ್ರಮಗಳು ಅನಿವಾರ್ಯವಾಗಿದೆ. ಈ ಕಾರಣದಿಂದ ಕೃಷಿಕರ ಸಂಸ್ಥೆಯಾದ ಕ್ಯಾಂಪ್ಕೋ ಸಹಿತ ಎಲ್ಲಾ ಸಹಕಾರಿ ಸಂಸ್ಥೆಗಳು ಮತ್ತು ಸರ್ಕಾರವು ಕೂಡಾ ಪರಿಹಾರ ಮಾರ್ಗದ ಕಡೆಗೆ ನೆರವು ನೀಡಬೇಕಿದೆ ಎಂದು ಕೃಷಿಕರು ಒತ್ತಾಯಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

3 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

4 hours ago

ಮುಂಗಾರು ಮೇ 26ಕ್ಕೆ ಕೇರಳ ಪ್ರವೇಶ ಸಾಧ್ಯ : ಕರ್ನಾಟಕದ ಹಲವೆಡೆ ಭಾರೀ ಮಳೆ ಎಚ್ಚರಿಕೆ – ರೈತರಿಗೆ ಸಲಹೆ ಏನು..?

ಮೇ 26ರಂದು ಕೇರಳಕ್ಕೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…

4 hours ago

ಅಡಿಕೆ ಮಾರುಕಟ್ಟೆಯಲ್ಲಿ ಆತಂಕದ ತಿರುವು..! ಧಾರಣೆ ಇಳಿಕೆ ಯಾಕೆ..? ಮತ್ತೆ ಏರಿಕೆಯಾಗುತ್ತದಾ..? ಬೆಳೆಗಾರರಲ್ಲಿ ಹೆಚ್ಚಿದ ಕುತೂಹಲ

ಚಾಲಿ ಅಡಿಕೆ ಧಾರಣೆ ಮೇ ತಿಂಗಳಲ್ಲಿ ಇಳಿಕೆಯಾಗುತ್ತಿರುವುದು ರೈತರ ಆತಂಕಕ್ಕೆ ಕಾರಣವಾಗಿದೆ. ಬರ್ಮಾ-ಇಂಡೋನೇಷ್ಯಾ…

6 hours ago

ರಬ್ಬರ್‌ ದರ 13 ವರ್ಷಗಳಲ್ಲಿ ದಾಖಲೆ ಮಟ್ಟಕ್ಕೆ..! ಆದರೆ ಯಾಕೆ ಬೆಳೆಗಾರರು ಇನ್ನೂ ಚಿಂತೆಯಲ್ಲಿ..?

ರಬ್ಬರ್‌ ದರವು ದೇಶದಲ್ಲಿ ದಾಖಲೆ ಮಟ್ಟ ತಲುಪಿದ್ದು, ರೈತರಿಗೆ ಲಾಭದ ನಿರೀಕ್ಷೆ ಮೂಡಿಸಿದೆ.…

12 hours ago