ಅಡಿಕೆ ಹಳದಿ ಎಲೆರೋಗ | ತಜ್ಞರ ಸಮಿತಿ‌ ರಚಿಸಿದ ಕೇಂದ್ರ ಕೃಷಿ ಸಚಿವಾಲಯ

October 19, 2022
8:40 PM

ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ ಹಾಗೂ ಇತರ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ  ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ರಚಿಸಲಾಗಿದೆ.

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ‌ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror