ಅಡಿಕೆ ಹಳದಿ ಎಲೆರೋಗ | ತಜ್ಞರ ಸಮಿತಿ‌ ರಚಿಸಿದ ಕೇಂದ್ರ ಕೃಷಿ ಸಚಿವಾಲಯ

October 19, 2022
8:40 PM

ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ, ಎಲೆ ಚುಕ್ಕಿ ರೋಗ ಹಾಗೂ ಇತರ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ  ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.

ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ರಚಿಸಲಾಗಿದೆ.

ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ‌ ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror