ಅಡಿಕೆ ಹಳದಿ ಎಲೆರೋಗಕ್ಕೆ 25 ಕೋಟಿ ಅನುದಾನ ಇರಿಸಿದ್ದರೂ ವಿನಿಯೋಗ ಆಗಿಲ್ಲ | ಇದು ಆಡಳಿತ ವೈಫಲ್ಯ ಎಂದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ |

September 18, 2022
11:04 PM

ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ‌ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.

ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್‌ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್‌ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror