ಸುದ್ದಿಗಳು

ಅಡಿಕೆ ಹಳದಿ ಎಲೆರೋಗಕ್ಕೆ 25 ಕೋಟಿ ಅನುದಾನ ಇರಿಸಿದ್ದರೂ ವಿನಿಯೋಗ ಆಗಿಲ್ಲ | ಇದು ಆಡಳಿತ ವೈಫಲ್ಯ ಎಂದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ |

Share

ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ‌ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement

ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.

ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್‌ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್‌ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

18 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago

ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ | ರಾಸಾಯನಿಕ ಬಳಸದೆ ಸಹಜ ಕೃಷಿ

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…

1 day ago

ಆತ್ಮನಿರ್ಭರ ಯೋಜನೆಯಡಿಯಲ್ಲಿ ಉತ್ತಮ ಕಾರ್ಯ | ದೇಶದ ಗಮನ ಸೆಳೆದಿರುವ ಉಜಿರೆ ಗ್ರಾಮ | ದೆಹಲಿಯ ಸ್ವಾತಂತ್ರೋತ್ಸವ ಕಾರ್ಯಕ್ರಮ ಉಜಿರೆ ಪಂಚಾಯತ್‌ ಆಡಳಿತ |

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…

1 day ago

ಕಾವೇರಿ ನದಿ ನೀರು ಮಲಿನ ತಡೆಯಲು ಕ್ರಮ | ಅಸ್ತಿ ವಿಸರ್ಜನೆ ಮಾಡದಂತೆ ಸೂಚನೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…

1 day ago