ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.
ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…