Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗಕ್ಕೆ 25 ಕೋಟಿ ಅನುದಾನ ಇರಿಸಿದ್ದರೂ ವಿನಿಯೋಗ ಆಗಿಲ್ಲ | ಇದು ಆಡಳಿತ ವೈಫಲ್ಯ ಎಂದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ |

Share

ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ‌ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.

ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್‌ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್‌ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

19 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

1 day ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

1 day ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago