Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗಕ್ಕೆ 25 ಕೋಟಿ ಅನುದಾನ ಇರಿಸಿದ್ದರೂ ವಿನಿಯೋಗ ಆಗಿಲ್ಲ | ಇದು ಆಡಳಿತ ವೈಫಲ್ಯ ಎಂದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ |

Share

ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ‌ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.

ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್‌ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್‌ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

23 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago