ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.
ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…