ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.
ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…
“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…