Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗಕ್ಕೆ 25 ಕೋಟಿ ಅನುದಾನ ಇರಿಸಿದ್ದರೂ ವಿನಿಯೋಗ ಆಗಿಲ್ಲ | ಇದು ಆಡಳಿತ ವೈಫಲ್ಯ ಎಂದ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ |

Share

ಅಡಿಕೆ ಹಳದಿ ಎಲೆರೋಗದ ಬಗ್ಗೆ ಚರ್ಚೆ ಹೆಚ್ಚಾಗುತ್ತಿದ್ದಂತೆಯೇ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ವೈಫಲ್ಯದ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ‌ ಸಂದರ್ಭದಲ್ಲಿ 25 ಕೋಟಿ ವಿಶೇಷ ಅನುದಾನ ಇರಿಸಿದ್ದರೂ ಅದು ಸಮರ್ಪಕವಾಗಿ ವಿನಿಯೋಗ ಆಗಿಲ್ಲ. ಇದು ದೊಡ್ಡ ವೈಫಲ್ಯವೇ ಆಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Advertisement
Advertisement

ರಾಜ್ಯದಲ್ಲಿ ಅದರಲ್ಲೂ ದ ಕ ಜಿಲ್ಲೆಯಲ್ಲಿ ಬಹುಪಾಲು ಮಂದಿ ಅಡಿಕೆ ಬೆಳೆಯುತ್ತಾರೆ. ಈಗ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಅಡಿಕೆ ಬೆಳೆಗಾರರ ಸಮಸ್ಯೆಯಾದ ಅಡಿಕೆ ಹಳದಿ ರೋಗಕ್ಕೆ ಪರಿಹಾರ ಕಾಣದೇ ಇದ್ದುದ್ದು ಆಡಳಿತ ವೈಫಲ್ಯವಾಗಿದೆ ಎಂದು ಹೇಳಿದ್ದಾರೆ. ಹಳದಿ ಎಲೆರೋಗಕ್ಕೆ ಇಂದಿಗೂ ಶಾಶ್ವತ ಪರಿಹಾರ ಸಿಕ್ಕಿಲ್ಲ ಎನ್ನುವುದೇ ವಿಷಾದದ ಸಂಗತಿಯಾಗಿದೆ ಎಂದರು.

Advertisement

ಬಿಜೆಪಿ ಅಡಿಕೆ ಬೆಳೆಗಾರರ ಪರವಾಗಿಯೇ ಈ ಹಿಂದೆ ಹೋರಾಟ ಮಾಡಿತ್ತು. ಅಡಿಕೆ ಧಾರಣೆ ಕುಸಿತವಾದಾಗ ಪಾದಯಾತ್ರೆ ಮೂಲಕ ಹೋರಾಟ ನಡೆಸಲಾಗಿತ್ತು. ಈ ಮೂಲಕ ಧಾರಣೆ ಏರಿಕೆಯೂ ಕಂಡಿತ್ತು. ಈಗ ಕೇಂದ್ರ ಸರ್ಕಾರ ಹಲವು ಕ್ರಮ ಕೈಗೊಂಡರೂ ರಾಜ್ಯದಲ್ಲಿ ಅಡಿಕೆಯ ಬಗ್ಗೆ ಇನ್ನೂ ಗಟ್ಟಿ ಧ್ವನಿಯಾಗಿಲ್ಲ ಎಂದರು. ರಬ್ಬರ್‌ ಬಗ್ಗೆಯೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ರಬ್ಬರ್‌ಗೆ ಉತ್ತಮ ಧಾರಣೆ ಹಾಗು ಮೌಲ್ಯ ದೊರೆಯಬೇಕು ಎಂಬ ದೃಷ್ಠಿಯಿಂದ ಸುಳ್ಯದಲ್ಲಿ ಟಯರ್ ಫ್ಯಾಕ್ಟರಿ ಸ್ಥಾಪನೆ ಯೋಜನೆ ರೂಪಿಸಲಾಗಿತ್ತು. ಈಗ ಅದೂ ನೆನೆಗುದಿಗೆ ಬಿದ್ದಿದೆ ಎಂದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪರಿಶ್ರಮ ಮತ್ತು ಪ್ರತಿಫಲ

ಮಕ್ಕಳಲ್ಲಿ ಸಾಧನೆಯ ಸಾಧ್ಯತೆಗಳತ್ತ ಬೊಟ್ಟು ಮಾಡಿ ಎತ್ತರದ ಮಾದರಿಗಳನ್ನು ತೋರಿಸುವ ಕೆಲಸವು ಶಿಕ್ಷಕರಿಂದ…

19 mins ago

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

8 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

13 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

13 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

16 hours ago