ಅಡಿಕೆಯ ಹಳದಿ ಎಲೆರೋಗ | ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಮುಂದುವರಿದ ಸಂಶೋಧನಾ ಪ್ರಯತ್ನ |

November 10, 2022
8:49 AM

ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.

ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು  ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ  ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.

ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್‌ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್‌ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ  ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ  ಸಂಪಾಜೆ,ಚೆಂಬು ಗ್ರಾಮಗಳಿಂದ  ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ
July 5, 2026
10:43 AM
by: ದ ರೂರಲ್ ಮಿರರ್.ಕಾಂ
ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ
July 4, 2026
10:47 PM
by: ದ ರೂರಲ್ ಮಿರರ್.ಕಾಂ
ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?
July 4, 2026
9:45 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror