ಅಡಿಕೆಯ ಹಳದಿ ಎಲೆರೋಗ | ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಮುಂದುವರಿದ ಸಂಶೋಧನಾ ಪ್ರಯತ್ನ |

November 10, 2022
8:49 AM

ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.

ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು  ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ  ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.

ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್‌ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್‌ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ  ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ  ಸಂಪಾಜೆ,ಚೆಂಬು ಗ್ರಾಮಗಳಿಂದ  ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror