ಅಡಿಕೆಯ ಹಳದಿ ಎಲೆರೋಗ | ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಮುಂದುವರಿದ ಸಂಶೋಧನಾ ಪ್ರಯತ್ನ |

November 10, 2022
8:49 AM

ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.

ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು  ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ  ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.

ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್‌ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್‌ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ  ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ  ಸಂಪಾಜೆ,ಚೆಂಬು ಗ್ರಾಮಗಳಿಂದ  ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

ಇದನ್ನೂ ಓದಿ

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS
ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ
May 23, 2026
6:45 AM
by: ಮಿರರ್‌ ಡೆಸ್ಕ್
ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ
May 22, 2026
8:17 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22-05-2026 | ಕರ್ನಾಟಕದಲ್ಲಿ ಇನ್ನೂ ಎರಡು ದಿನ ಮಳೆ ಸಾಧ್ಯತೆ – ಮೇ 30ರ ಸುಮಾರಿಗೆ ಮುಂಗಾರು ಪ್ರವೇಶ ಸಾಧ್ಯತೆ
May 22, 2026
1:14 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror