ಕೇಂದ್ರೀಯ ಸಂಸ್ಥೆ ಸಿಪಿಸಿಆರ್ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.
ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.
ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್ಸ್ಫಾಟ್ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳ ತಂಡ ಸಂಪಾಜೆ,ಚೆಂಬು ಗ್ರಾಮಗಳಿಂದ ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…
ದೇಶದ ಹಲವು ನಗರಗಳಲ್ಲಿ ವಾಣಿಜ್ಯ LPG ಕೊರತೆಯಿಂದ ಹೋಟೆಲ್ ಮತ್ತು ಆಹಾರ ವಿತರಣೆ…
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…