Advertisement
ಕೃಷಿ

ಅಡಿಕೆಯ ಹಳದಿ ಎಲೆರೋಗ | ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಮುಂದುವರಿದ ಸಂಶೋಧನಾ ಪ್ರಯತ್ನ |

Share

ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.

ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು  ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ  ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.

ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್‌ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್‌ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ  ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ  ಸಂಪಾಜೆ,ಚೆಂಬು ಗ್ರಾಮಗಳಿಂದ  ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

2 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

2 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

5 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

14 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

15 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

21 hours ago