ಕೇಂದ್ರೀಯ ಸಂಸ್ಥೆ ಸಿಪಿಸಿಆರ್ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.
ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.
ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್ಸ್ಫಾಟ್ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳ ತಂಡ ಸಂಪಾಜೆ,ಚೆಂಬು ಗ್ರಾಮಗಳಿಂದ ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…