Advertisement
ಕೃಷಿ

ಅಡಿಕೆಯ ಹಳದಿ ಎಲೆರೋಗ | ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಮುಂದುವರಿದ ಸಂಶೋಧನಾ ಪ್ರಯತ್ನ |

Share

ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.

ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು  ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ  ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.

ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್‌ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್‌ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ  ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ  ಸಂಪಾಜೆ,ಚೆಂಬು ಗ್ರಾಮಗಳಿಂದ  ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

22 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago