Advertisement
ಕೃಷಿ

ಅಡಿಕೆಯ ಹಳದಿ ಎಲೆರೋಗ | ಸಿಪಿಸಿಆರ್‌ಐ ವಿಜ್ಞಾನಿಗಳಿಂದ ಮುಂದುವರಿದ ಸಂಶೋಧನಾ ಪ್ರಯತ್ನ |

Share

ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ಕಳೆದ ಎರಡು ವರ್ಷಗಳಿಂದ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿಯ ಕಡೆಗೆ ನಿರಂತರ ಪ್ರಯತ್ನ ಮಾಡುತ್ತಿದೆ. ಕಾಸರಗೋಡು ಹಾಗೂ ವಿಟ್ಲದ ಸಿಪಿಸಿಆರ್‌ಐ ವಿಜ್ಞಾನಿಗಳು ಈ ಪ್ರಯತ್ನವನ್ನು ತಮ್ಮದೇ ಮಿತಿಯಲ್ಲಿ ಮುಂದುವರಿಸಿದ್ದಾರೆ. ಎರಡು ದಿನಗಳ ಹಿಂದೆ ಹಳದಿ ಎಲೆರೋಗ ಪೀಡಿತ ಪ್ರದೇಶದಿಂದ ಮತ್ತೆ ಅಡಿಕೆ ಹಿಂಗಾರ ಸಂಗ್ರಹ ಕಾರ್ಯವನ್ನು ನಡೆಸಿದ್ದಾರೆ.

ಸುಳ್ಯ ಪ್ರದೇಶದ ಸಂಪಾಜೆ , ಅರಂತೋಡು ಸೇರಿದಂತೆ, ಕೊಪ್ಪ, ಶೃಂಗೇರಿ ವಿವಿದೆಡೆ ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಕಂಗಾಲಾಗಿದ್ದಾರೆ. ಈಚೆಗೆ ಪುತ್ತೂರು ತಾಲೂಕಿನ ವಿವಿಧ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆರೋಗ ನಿಧಾನವಾಗಿ ವ್ಯಾಪಿಸುತ್ತಿದೆ. ಈ ನಡುವೆ ಈ ರೋಗಕ್ಕೆ ಫೈಟೋಪ್ಲಾಸ್ಮಾ ಕಾರಣ ಎಂದು ಸಂಶೋಧನೆಯ ಮೂಲಕ ಕಂಡುಕೊಂಡಿರುವ ಕೇಂದ್ರೀಯ ಸಂಸ್ಥೆ ಸಿಪಿಸಿಆರ್‌ಐ ವಿಜ್ಞಾನಿಗಳು, ಈ ರೋಗಕ್ಕೆ ಅಡಿಕೆ ಹಳದಿ ಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವ ಮೂಲಕ ಪರಿಹಾರ ಕಂಡುಕೊಳ್ಳಬಹುದು  ಎಂದು ಈ ನಿಟ್ಟಿನಲ್ಲಿ ಹೆಜ್ಜೆ ಇರಿಸಿದ್ದರು. ಆದರೆ ಪ್ರಯೋಗಾಲಯ ಸೇರಿದಂತೆ ಮೂಲಭೂತ ಸೌಲಭ್ಯದ ಕೊರತೆಯ ಹಿನ್ನೆಲೆಯಲ್ಲಿ  ನಿಧಾನಗತಿಯಲ್ಲಿ ಈ ಪ್ರಕ್ರಿಯೆ ನಡೆಯುತ್ತಿತ್ತು.

ಕಳೆದ ವರ್ಷ ಅಡಿಕೆ ಹಳದಿ ಎಲೆರೋಗ ಪೀಡಿತ ಹಾಟ್‌ಸ್ಫಾಟ್‌ ಪ್ರದೇಶದಿಂದ ಅಡಿಕೆ ಹಿಂಗಾರವನ್ನು ಸಂಗ್ರಹಿಸಿ ಟಿಶ್ಯೂ ಕಲ್ಚರ್‌ ಅಭಿವೃದ್ಧಿಪಡಿಸುವ ಕೆಲಸಕ್ಕೆ ಮುಂದಾಗಿದ್ದಾರೆ. ಈ ಪ್ರಯೋಗ ನಡೆಯುತ್ತಿದೆ, ಇನ್ನೂ ಎರಡು ವರ್ಷಗಳ ಕಾಲ ಗಿಡಗಳ ಅಭಿವೃದ್ಧಿಗೆ  ಬೇಕಾಗುತ್ತದೆ. ಈ ವರ್ಷವೂ ಕೂಡಾ ಅಡಿಕೆ ಹಿಂಗಾರವನ್ನು ತೆಗೆಯುವ ಮೂಲಕ ಸಂಶೋಧನಾ ಪ್ರಗತಿಯನ್ನು ಮುಂದುವರಿಸಿದ್ದಾರೆ.ಕಳೆದ ವರ್ಷದಂತೇ ಈ ವರ್ಷವೂ ಕೇರಳದ ಕಾಸರಗೋಡಿನಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ  ಸಂಪಾಜೆ,ಚೆಂಬು ಗ್ರಾಮಗಳಿಂದ  ಗುರುತಿಸಲಾದ ಅಡಿಕೆ ಮರಗಳಿಂದ ಸಿಂಗಾರ ಸಂಗ್ರಹಿಸುವ ಪ್ರಯತ್ನ ಮಾಡಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

15 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

21 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago