ಅಡಿಕೆ ಹಳದಿಎಲೆ ರೋಗ ನಿರೋಧಕ ತಳಿ ಅಭಿವೃದ್ಧಿ | ಸಂಪಾಜೆಯಲ್ಲಿ ವಿಜ್ಞಾನಿಗಳಿಂದ ಅಡಿಕೆ ಮರಗಳ ಗುರುತು ಕಾರ್ಯ ಆರಂಭ |

October 18, 2021
9:42 PM

ಅಡಿಕೆ ಹಳದಿಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ಸೋಮವಾರ ಸಂಪಾಜೆ-ಚೆಂಬು ಪ್ರದೇಶಕ್ಕೆ ಭೇಟಿ ನೀಡಿದರು. ಅನೇಕ ವರ್ಷಗಳಿಂದ ಹಳದಿ ಎಲೆರೋಗ ಇದ್ದ ತೋಟದಲ್ಲಿ ಈಗಲೂ ಹಸಿರಾಗಿರುವ ಅಡಿಕೆ ಮರಗಳನ್ನು ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು. ಮುಂದಿನ ದಿನಗಳನ್ನು ಇನ್ನಷ್ಟು ತೋಟಗಳಲ್ಲಿ ಇಂತಹ ಮರಗಳ ಗುರುತಿಸುವಿಕೆಯ ಕಾರ್ಯ ನಡೆಯಲಿದೆ.

Advertisement

ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್‌ಸ್ಫಾಟ್‌ ಎಂದು ಗುರುತಿಸಲಾಗಿತ್ತು. ಕಳೆದ ಅನೇಕ ವರ್ಷಗಳಿಂದ ಈ ಪ್ರದೇಶದಲ್ಲಿ ಹಳದಿ ಎಲೆರೋಗ ಕಂಡುಬಂದು ವಿಸ್ತರಣೆಯಾಗಿತ್ತು. ಅನೇಕ ವರ್ಷಗಳಿಂದಲೂ ಹಳದಿ ಎಲೆರೋಗ ಇದ್ದು ಅಂತಹ ತೋಟದಲ್ಲಿ ಈಗಲೂ ಹಸಿರಾಗಿರುವ ಮರಗಳಿಗೆ ರೋಗ ನಿರೋಧಕ ಶಕ್ತಿ ಇದೆ ಎಂಬುದು ಸಾಮಾನ್ಯವಾಗಿರುವ ಅಧ್ಯಯನ.

ಇದೀಗ ಅಂತಹ ಮರಗಳ ಗುರುತು ಮಾಡುವ ಕಾರ್ಯವನ್ನು ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಮಾಡುತ್ತಿದೆ. ಮುಂದೆ ಈ ಮರಗಳ ಆರೈಕೆ ಮಾಡಿದ ಬಳಿಕ ರೋಗದ ಅಂಶಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ರೋಗ ಮುಕ್ತವಾಗಿರುವ ಮರ ಎಂಬ ಖಾತ್ರಿ ಬಳಿಕ ಮುಂದಿನ ವರ್ಷ ಅಂತಹದ್ದೇ ಮರಗಳ ನಡುವೆ ಪರಾಸ್ಪರ್ಶ ನಡೆಸಿ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವುದು ಹಾಗೂ ಅದೇ ವೇಳೆ ಟಿಶ್ಯು ಕಲ್ಚರ್‌ ಗಿಡಗಳ ಅಭಿವೃದ್ದಿ ಕೂಡಾ ನಡೆಸುವುದು ಈ ಯೋಜನೆಯ ಉದ್ದೇಶವಾಗಿದೆ.

ಸೋಮವಾರ ಸಂಪಾಜೆ ಚೆಂಬು ಪ್ರದೇಶದಲ್ಲಿ ಸಿಪಿಸಿಆರ್‌ಐ ವಿಟ್ಲದ ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಅವರ ನೇತೃತ್ವದಲ್ಲಿ ಮರಗಳನ್ನು ಗುರುತು ಮಾಡುವ ಕೆಲಸ ನಡೆಯಿತು.ಶ್ರೀನಿವಾಸ ನಿಡಿಂಜಿ, ರವಿ ಬಾಲೆಂಬಿ, ಗಿರೀಶ್‌ ಚಂದಡ್ಕ, ಭವ್ಯಾನಂದ ಕುಯಿಂತೋಡು ಅವರ ತೋಟಗಳಿಗೆ ಭೇಟಿ ನೀಡಿದರು.

 

ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ನೇತೃತ್ವದ ತಂಡ ಸಹಕಾರ ನೀಡಿತು. ಈ ಸಂದರ್ಭ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಕೃಷಿಕರಾದ ಭವ್ಯಾನಂದ ಕುಯಿಂತೋಡು, ಶ್ರೀನಿವಾಸ ನಿಡಿಂಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ  ಇದ್ದರು.

 

 

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ
ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ
February 21, 2026
10:19 AM
by: ಮಹೇಶ್ ಪುಚ್ಚಪ್ಪಾಡಿ
ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ
February 21, 2026
10:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror