MIRROR FOCUS

ಅಡಿಕೆ ಹಳದಿಎಲೆ ರೋಗ ನಿರೋಧಕ ತಳಿ ಅಭಿವೃದ್ಧಿ | ಸಂಪಾಜೆಯಲ್ಲಿ ವಿಜ್ಞಾನಿಗಳಿಂದ ಅಡಿಕೆ ಮರಗಳ ಗುರುತು ಕಾರ್ಯ ಆರಂಭ |

Share

ಅಡಿಕೆ ಹಳದಿಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ಸೋಮವಾರ ಸಂಪಾಜೆ-ಚೆಂಬು ಪ್ರದೇಶಕ್ಕೆ ಭೇಟಿ ನೀಡಿದರು. ಅನೇಕ ವರ್ಷಗಳಿಂದ ಹಳದಿ ಎಲೆರೋಗ ಇದ್ದ ತೋಟದಲ್ಲಿ ಈಗಲೂ ಹಸಿರಾಗಿರುವ ಅಡಿಕೆ ಮರಗಳನ್ನು ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು. ಮುಂದಿನ ದಿನಗಳನ್ನು ಇನ್ನಷ್ಟು ತೋಟಗಳಲ್ಲಿ ಇಂತಹ ಮರಗಳ ಗುರುತಿಸುವಿಕೆಯ ಕಾರ್ಯ ನಡೆಯಲಿದೆ.

ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್‌ಸ್ಫಾಟ್‌ ಎಂದು ಗುರುತಿಸಲಾಗಿತ್ತು. ಕಳೆದ ಅನೇಕ ವರ್ಷಗಳಿಂದ ಈ ಪ್ರದೇಶದಲ್ಲಿ ಹಳದಿ ಎಲೆರೋಗ ಕಂಡುಬಂದು ವಿಸ್ತರಣೆಯಾಗಿತ್ತು. ಅನೇಕ ವರ್ಷಗಳಿಂದಲೂ ಹಳದಿ ಎಲೆರೋಗ ಇದ್ದು ಅಂತಹ ತೋಟದಲ್ಲಿ ಈಗಲೂ ಹಸಿರಾಗಿರುವ ಮರಗಳಿಗೆ ರೋಗ ನಿರೋಧಕ ಶಕ್ತಿ ಇದೆ ಎಂಬುದು ಸಾಮಾನ್ಯವಾಗಿರುವ ಅಧ್ಯಯನ.

ಇದೀಗ ಅಂತಹ ಮರಗಳ ಗುರುತು ಮಾಡುವ ಕಾರ್ಯವನ್ನು ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಮಾಡುತ್ತಿದೆ. ಮುಂದೆ ಈ ಮರಗಳ ಆರೈಕೆ ಮಾಡಿದ ಬಳಿಕ ರೋಗದ ಅಂಶಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ರೋಗ ಮುಕ್ತವಾಗಿರುವ ಮರ ಎಂಬ ಖಾತ್ರಿ ಬಳಿಕ ಮುಂದಿನ ವರ್ಷ ಅಂತಹದ್ದೇ ಮರಗಳ ನಡುವೆ ಪರಾಸ್ಪರ್ಶ ನಡೆಸಿ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವುದು ಹಾಗೂ ಅದೇ ವೇಳೆ ಟಿಶ್ಯು ಕಲ್ಚರ್‌ ಗಿಡಗಳ ಅಭಿವೃದ್ದಿ ಕೂಡಾ ನಡೆಸುವುದು ಈ ಯೋಜನೆಯ ಉದ್ದೇಶವಾಗಿದೆ.

ಸೋಮವಾರ ಸಂಪಾಜೆ ಚೆಂಬು ಪ್ರದೇಶದಲ್ಲಿ ಸಿಪಿಸಿಆರ್‌ಐ ವಿಟ್ಲದ ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಅವರ ನೇತೃತ್ವದಲ್ಲಿ ಮರಗಳನ್ನು ಗುರುತು ಮಾಡುವ ಕೆಲಸ ನಡೆಯಿತು.ಶ್ರೀನಿವಾಸ ನಿಡಿಂಜಿ, ರವಿ ಬಾಲೆಂಬಿ, ಗಿರೀಶ್‌ ಚಂದಡ್ಕ, ಭವ್ಯಾನಂದ ಕುಯಿಂತೋಡು ಅವರ ತೋಟಗಳಿಗೆ ಭೇಟಿ ನೀಡಿದರು.

 

ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ನೇತೃತ್ವದ ತಂಡ ಸಹಕಾರ ನೀಡಿತು. ಈ ಸಂದರ್ಭ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಕೃಷಿಕರಾದ ಭವ್ಯಾನಂದ ಕುಯಿಂತೋಡು, ಶ್ರೀನಿವಾಸ ನಿಡಿಂಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ  ಇದ್ದರು.

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

10 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

15 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

18 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

19 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

19 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

19 hours ago