ಅಡಿಕೆ ಹಳದಿಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳು ಸೋಮವಾರ ಸಂಪಾಜೆ-ಚೆಂಬು ಪ್ರದೇಶಕ್ಕೆ ಭೇಟಿ ನೀಡಿದರು. ಅನೇಕ ವರ್ಷಗಳಿಂದ ಹಳದಿ ಎಲೆರೋಗ ಇದ್ದ ತೋಟದಲ್ಲಿ ಈಗಲೂ ಹಸಿರಾಗಿರುವ ಅಡಿಕೆ ಮರಗಳನ್ನು ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು. ಮುಂದಿನ ದಿನಗಳನ್ನು ಇನ್ನಷ್ಟು ತೋಟಗಳಲ್ಲಿ ಇಂತಹ ಮರಗಳ ಗುರುತಿಸುವಿಕೆಯ ಕಾರ್ಯ ನಡೆಯಲಿದೆ.
ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್ಸ್ಫಾಟ್ ಎಂದು ಗುರುತಿಸಲಾಗಿತ್ತು. ಕಳೆದ ಅನೇಕ ವರ್ಷಗಳಿಂದ ಈ ಪ್ರದೇಶದಲ್ಲಿ ಹಳದಿ ಎಲೆರೋಗ ಕಂಡುಬಂದು ವಿಸ್ತರಣೆಯಾಗಿತ್ತು. ಅನೇಕ ವರ್ಷಗಳಿಂದಲೂ ಹಳದಿ ಎಲೆರೋಗ ಇದ್ದು ಅಂತಹ ತೋಟದಲ್ಲಿ ಈಗಲೂ ಹಸಿರಾಗಿರುವ ಮರಗಳಿಗೆ ರೋಗ ನಿರೋಧಕ ಶಕ್ತಿ ಇದೆ ಎಂಬುದು ಸಾಮಾನ್ಯವಾಗಿರುವ ಅಧ್ಯಯನ.
ಇದೀಗ ಅಂತಹ ಮರಗಳ ಗುರುತು ಮಾಡುವ ಕಾರ್ಯವನ್ನು ಸಿಪಿಸಿಆರ್ಐ ವಿಜ್ಞಾನಿಗಳ ತಂಡ ಮಾಡುತ್ತಿದೆ. ಮುಂದೆ ಈ ಮರಗಳ ಆರೈಕೆ ಮಾಡಿದ ಬಳಿಕ ರೋಗದ ಅಂಶಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ರೋಗ ಮುಕ್ತವಾಗಿರುವ ಮರ ಎಂಬ ಖಾತ್ರಿ ಬಳಿಕ ಮುಂದಿನ ವರ್ಷ ಅಂತಹದ್ದೇ ಮರಗಳ ನಡುವೆ ಪರಾಸ್ಪರ್ಶ ನಡೆಸಿ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವುದು ಹಾಗೂ ಅದೇ ವೇಳೆ ಟಿಶ್ಯು ಕಲ್ಚರ್ ಗಿಡಗಳ ಅಭಿವೃದ್ದಿ ಕೂಡಾ ನಡೆಸುವುದು ಈ ಯೋಜನೆಯ ಉದ್ದೇಶವಾಗಿದೆ.
ಸೋಮವಾರ ಸಂಪಾಜೆ ಚೆಂಬು ಪ್ರದೇಶದಲ್ಲಿ ಸಿಪಿಸಿಆರ್ಐ ವಿಟ್ಲದ ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಅವರ ನೇತೃತ್ವದಲ್ಲಿ ಮರಗಳನ್ನು ಗುರುತು ಮಾಡುವ ಕೆಲಸ ನಡೆಯಿತು.ಶ್ರೀನಿವಾಸ ನಿಡಿಂಜಿ, ರವಿ ಬಾಲೆಂಬಿ, ಗಿರೀಶ್ ಚಂದಡ್ಕ, ಭವ್ಯಾನಂದ ಕುಯಿಂತೋಡು ಅವರ ತೋಟಗಳಿಗೆ ಭೇಟಿ ನೀಡಿದರು.
ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ನೇತೃತ್ವದ ತಂಡ ಸಹಕಾರ ನೀಡಿತು. ಈ ಸಂದರ್ಭ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಕೃಷಿಕರಾದ ಭವ್ಯಾನಂದ ಕುಯಿಂತೋಡು, ಶ್ರೀನಿವಾಸ ನಿಡಿಂಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಇದ್ದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…