ಅಡಿಕೆ ಹಳದಿಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್ಐ ವಿಜ್ಞಾನಿಗಳು ಸೋಮವಾರ ಸಂಪಾಜೆ-ಚೆಂಬು ಪ್ರದೇಶಕ್ಕೆ ಭೇಟಿ ನೀಡಿದರು. ಅನೇಕ ವರ್ಷಗಳಿಂದ ಹಳದಿ ಎಲೆರೋಗ ಇದ್ದ ತೋಟದಲ್ಲಿ ಈಗಲೂ ಹಸಿರಾಗಿರುವ ಅಡಿಕೆ ಮರಗಳನ್ನು ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು. ಮುಂದಿನ ದಿನಗಳನ್ನು ಇನ್ನಷ್ಟು ತೋಟಗಳಲ್ಲಿ ಇಂತಹ ಮರಗಳ ಗುರುತಿಸುವಿಕೆಯ ಕಾರ್ಯ ನಡೆಯಲಿದೆ.
ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್ಸ್ಫಾಟ್ ಎಂದು ಗುರುತಿಸಲಾಗಿತ್ತು. ಕಳೆದ ಅನೇಕ ವರ್ಷಗಳಿಂದ ಈ ಪ್ರದೇಶದಲ್ಲಿ ಹಳದಿ ಎಲೆರೋಗ ಕಂಡುಬಂದು ವಿಸ್ತರಣೆಯಾಗಿತ್ತು. ಅನೇಕ ವರ್ಷಗಳಿಂದಲೂ ಹಳದಿ ಎಲೆರೋಗ ಇದ್ದು ಅಂತಹ ತೋಟದಲ್ಲಿ ಈಗಲೂ ಹಸಿರಾಗಿರುವ ಮರಗಳಿಗೆ ರೋಗ ನಿರೋಧಕ ಶಕ್ತಿ ಇದೆ ಎಂಬುದು ಸಾಮಾನ್ಯವಾಗಿರುವ ಅಧ್ಯಯನ.
ಇದೀಗ ಅಂತಹ ಮರಗಳ ಗುರುತು ಮಾಡುವ ಕಾರ್ಯವನ್ನು ಸಿಪಿಸಿಆರ್ಐ ವಿಜ್ಞಾನಿಗಳ ತಂಡ ಮಾಡುತ್ತಿದೆ. ಮುಂದೆ ಈ ಮರಗಳ ಆರೈಕೆ ಮಾಡಿದ ಬಳಿಕ ರೋಗದ ಅಂಶಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ರೋಗ ಮುಕ್ತವಾಗಿರುವ ಮರ ಎಂಬ ಖಾತ್ರಿ ಬಳಿಕ ಮುಂದಿನ ವರ್ಷ ಅಂತಹದ್ದೇ ಮರಗಳ ನಡುವೆ ಪರಾಸ್ಪರ್ಶ ನಡೆಸಿ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವುದು ಹಾಗೂ ಅದೇ ವೇಳೆ ಟಿಶ್ಯು ಕಲ್ಚರ್ ಗಿಡಗಳ ಅಭಿವೃದ್ದಿ ಕೂಡಾ ನಡೆಸುವುದು ಈ ಯೋಜನೆಯ ಉದ್ದೇಶವಾಗಿದೆ.
ಸೋಮವಾರ ಸಂಪಾಜೆ ಚೆಂಬು ಪ್ರದೇಶದಲ್ಲಿ ಸಿಪಿಸಿಆರ್ಐ ವಿಟ್ಲದ ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಅವರ ನೇತೃತ್ವದಲ್ಲಿ ಮರಗಳನ್ನು ಗುರುತು ಮಾಡುವ ಕೆಲಸ ನಡೆಯಿತು.ಶ್ರೀನಿವಾಸ ನಿಡಿಂಜಿ, ರವಿ ಬಾಲೆಂಬಿ, ಗಿರೀಶ್ ಚಂದಡ್ಕ, ಭವ್ಯಾನಂದ ಕುಯಿಂತೋಡು ಅವರ ತೋಟಗಳಿಗೆ ಭೇಟಿ ನೀಡಿದರು.
ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ನೇತೃತ್ವದ ತಂಡ ಸಹಕಾರ ನೀಡಿತು. ಈ ಸಂದರ್ಭ ಸಹಕಾರಿ ಯೂನಿಯನ್ ಅಧ್ಯಕ್ಷ ರಮೇಶ್ ದೇಲಂಪಾಡಿ, ಕೃಷಿಕರಾದ ಭವ್ಯಾನಂದ ಕುಯಿಂತೋಡು, ಶ್ರೀನಿವಾಸ ನಿಡಿಂಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ ಇದ್ದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…