Advertisement
MIRROR FOCUS

ಅಡಿಕೆ ಹಳದಿಎಲೆ ರೋಗ ನಿರೋಧಕ ತಳಿ ಅಭಿವೃದ್ಧಿ | ಸಂಪಾಜೆಯಲ್ಲಿ ವಿಜ್ಞಾನಿಗಳಿಂದ ಅಡಿಕೆ ಮರಗಳ ಗುರುತು ಕಾರ್ಯ ಆರಂಭ |

Share

ಅಡಿಕೆ ಹಳದಿಎಲೆರೋಗ ನಿರೋಧಕ ತಳಿ ಅಭಿವೃದ್ಧಿ ಹಿನ್ನೆಲೆಯಲ್ಲಿ ಸಿಪಿಸಿಆರ್‌ಐ ವಿಜ್ಞಾನಿಗಳು ಸೋಮವಾರ ಸಂಪಾಜೆ-ಚೆಂಬು ಪ್ರದೇಶಕ್ಕೆ ಭೇಟಿ ನೀಡಿದರು. ಅನೇಕ ವರ್ಷಗಳಿಂದ ಹಳದಿ ಎಲೆರೋಗ ಇದ್ದ ತೋಟದಲ್ಲಿ ಈಗಲೂ ಹಸಿರಾಗಿರುವ ಅಡಿಕೆ ಮರಗಳನ್ನು ಗುರುತು ಮಾಡುವ ಕಾರ್ಯಕ್ಕೆ ಚಾಲನೆ ನೀಡಿದರು. ಮುಂದಿನ ದಿನಗಳನ್ನು ಇನ್ನಷ್ಟು ತೋಟಗಳಲ್ಲಿ ಇಂತಹ ಮರಗಳ ಗುರುತಿಸುವಿಕೆಯ ಕಾರ್ಯ ನಡೆಯಲಿದೆ.

ಅಡಿಕೆ ಹಳದಿ ಎಲೆರೋಗಕ್ಕೆ ಸುಳ್ಯ ತಾಲೂಕಿನ ಸಂಪಾಜೆ ಹಾಗೂ ಕೊಡಗು ಜಿಲ್ಲೆಯ ಚೆಂಬು ಪ್ರದೇಶವು ಹಾಟ್‌ಸ್ಫಾಟ್‌ ಎಂದು ಗುರುತಿಸಲಾಗಿತ್ತು. ಕಳೆದ ಅನೇಕ ವರ್ಷಗಳಿಂದ ಈ ಪ್ರದೇಶದಲ್ಲಿ ಹಳದಿ ಎಲೆರೋಗ ಕಂಡುಬಂದು ವಿಸ್ತರಣೆಯಾಗಿತ್ತು. ಅನೇಕ ವರ್ಷಗಳಿಂದಲೂ ಹಳದಿ ಎಲೆರೋಗ ಇದ್ದು ಅಂತಹ ತೋಟದಲ್ಲಿ ಈಗಲೂ ಹಸಿರಾಗಿರುವ ಮರಗಳಿಗೆ ರೋಗ ನಿರೋಧಕ ಶಕ್ತಿ ಇದೆ ಎಂಬುದು ಸಾಮಾನ್ಯವಾಗಿರುವ ಅಧ್ಯಯನ.

ಇದೀಗ ಅಂತಹ ಮರಗಳ ಗುರುತು ಮಾಡುವ ಕಾರ್ಯವನ್ನು ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಮಾಡುತ್ತಿದೆ. ಮುಂದೆ ಈ ಮರಗಳ ಆರೈಕೆ ಮಾಡಿದ ಬಳಿಕ ರೋಗದ ಅಂಶಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆ ಮಾಡಿ ರೋಗ ಮುಕ್ತವಾಗಿರುವ ಮರ ಎಂಬ ಖಾತ್ರಿ ಬಳಿಕ ಮುಂದಿನ ವರ್ಷ ಅಂತಹದ್ದೇ ಮರಗಳ ನಡುವೆ ಪರಾಸ್ಪರ್ಶ ನಡೆಸಿ ರೋಗ ನಿರೋಧಕ ತಳಿ ಅಭಿವೃದ್ಧಿ ಮಾಡುವುದು ಹಾಗೂ ಅದೇ ವೇಳೆ ಟಿಶ್ಯು ಕಲ್ಚರ್‌ ಗಿಡಗಳ ಅಭಿವೃದ್ದಿ ಕೂಡಾ ನಡೆಸುವುದು ಈ ಯೋಜನೆಯ ಉದ್ದೇಶವಾಗಿದೆ.

ಸೋಮವಾರ ಸಂಪಾಜೆ ಚೆಂಬು ಪ್ರದೇಶದಲ್ಲಿ ಸಿಪಿಸಿಆರ್‌ಐ ವಿಟ್ಲದ ಬೆಳೆ ಉತ್ಪಾದನಾ ವಿಭಾಗದ ವಿಜ್ಞಾನಿ ಡಾ.ಭವಿಷ್ಯ ಅವರ ನೇತೃತ್ವದಲ್ಲಿ ಮರಗಳನ್ನು ಗುರುತು ಮಾಡುವ ಕೆಲಸ ನಡೆಯಿತು.ಶ್ರೀನಿವಾಸ ನಿಡಿಂಜಿ, ರವಿ ಬಾಲೆಂಬಿ, ಗಿರೀಶ್‌ ಚಂದಡ್ಕ, ಭವ್ಯಾನಂದ ಕುಯಿಂತೋಡು ಅವರ ತೋಟಗಳಿಗೆ ಭೇಟಿ ನೀಡಿದರು.

 

ಸಂಪಾಜೆ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ ಅವರ ನೇತೃತ್ವದ ತಂಡ ಸಹಕಾರ ನೀಡಿತು. ಈ ಸಂದರ್ಭ ಸಹಕಾರಿ ಯೂನಿಯನ್‌ ಅಧ್ಯಕ್ಷ ರಮೇಶ್‌ ದೇಲಂಪಾಡಿ, ಕೃಷಿಕರಾದ ಭವ್ಯಾನಂದ ಕುಯಿಂತೋಡು, ಶ್ರೀನಿವಾಸ ನಿಡಿಂಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಕಾರ್ಯದರ್ಶಿ  ಇದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

9 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

10 hours ago

ವಿದ್ಯಾರ್ಥಿ- ರೈತರ ವಾಕಥಾನ್ | ಪ್ರಕೃತಿ, ಯುವಜನತೆ ಮತ್ತು ಆರ್ಥಿಕತೆ – ಜೂನ್ 14 ರಂದು ಬೆಂಗಳೂರಿನಲ್ಲಿ ವಿಶೇಷ ಕಾರ್ಯಕ್ರಮ

ಬೆಂಗಳೂರು ಫ್ರೀಡಂ ಪಾರ್ಕ್‌ನಲ್ಲಿ ಜೂನ್ 14 ರಂದು "ಸ್ಟೂಡೆಂಟ್ಸ್ ಫಾರ್ಮರ್ಸ್ ವಾಕಥಾನ್ "…

16 hours ago

ಕಾಳುಮೆಣಸು ಬೆಳೆಗಾರರಿಗೆ ಸಿಹಿ ಸುದ್ದಿ – ಜೂನ್ ಅಂತ್ಯದೊಳಗೆ ಪೆಪ್ಪರ್ ಫ್ಯೂಚರ್ಸ್ ಮರುಪ್ರಾರಂಭಕ್ಕೆ NCDEX ಸಜ್ಜು

ಸುಮಾರು ಒಂದು ದಶಕದ ಬಳಿಕ NCDEX ಕಾಳುಮೆಣಸು ಫ್ಯೂಚರ್ಸ್ ವಹಿವಾಟನ್ನು ಜೂನ್ ಅಂತ್ಯದೊಳಗೆ…

22 hours ago

ಕೇರಳಂನಲ್ಲಿ ಶಿಗೆಲ್ಲಾ ಆತಂಕ – ಕೊಲ್ಲಂನಲ್ಲಿ ಇಬ್ಬರು ವಿದ್ಯಾರ್ಥಿಗಳಿಗೆ ಸೋಂಕು ದೃಢ, ಆರೋಗ್ಯ ಇಲಾಖೆ ಅಲರ್ಟ್!

ವಯನಾಡಿನಲ್ಲಿ ಮತ್ತೊಂದು ಶಿಗೆಲ್ಲಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹೆಚ್ಚಳವಾಗಿದೆ. ಮಕ್ಕಳಲ್ಲಿ ಸೋಂಕು…

22 hours ago