ಶೃಂಗೇರಿ ಮುಂದಿನ ಪ್ರದೇಶದಲ್ಲಿ ಕಣ್ಣು ಹಾಯಿಸಿದಷ್ಟು ದೂರಕ್ಕೆ ಅಡಿಕೆ ಮರ ಹಳದಿ ಬಣ್ಣಕ್ಕೆ ತಿರುಗಿ, ಬೋಳಾಗಿ ಒಣಗಿ ನಿಂತ ಅಡಿಕೆ ತೋಟಗಳು ಕಾಣಿಸಸುತ್ತವೆ, ಹಸಿರು ತೋಟಗಳೇ ಇಲ್ಲ ಎಂಬಷ್ಟು ರೋಗಪೀಡಿತ ತೋಟಗಳು ಕಂಡುಬಂದಿದೆ. ಮಲೆನಾಡಿನ ಸಾಂಪ್ರದಾಯಿಕ ಕೃಷಿಯಾದ ಅಡಿಕೆಯ ಮೇಲೆ ಭವಿಷ್ಯದಲ್ಲಿ ಹಾನಿ ಇರುವುದು ನಿಶ್ಚಿತವಾಗಿದ್ದು ಅಡಿಕೆ ವಹಿವಾಟು ಇಡೀ ಕರಾವಳಿ ಮೇಲೆ ಪರಿಣಾಮ ಬೀರುವುದರಿಂದ ಆರ್ಥಿಕ ವಹಿವಾಟಿನ ಮೇಲೂ ಪರಿಣಾಮವಾಗಬಹುದು.
ಹೀಗಾಗಿ ಇದೀಗ ಅಡಿಕೆ ಹಳದಿ ರೋಗ ತಡೆಗೆ ಯಾವ ಕ್ರಮ ಎಂಬುದರ ಬಗ್ಗೆ ಮೊದಲ ಹೆಜ್ಜೆಯಾದರೆ ಅದರ ಜೊತೆಗೇ ಹಳದಿ ಎಲೆ ರೋಗ ನಿರೋಧಕ ತಳಿ ಅಭಿವೃದ್ಧಿಯ ಬಗ್ಗೆ ಮತ್ತೆ ಅಧ್ಯಯನ ನಡೆಸಲು ಅಗತ್ಯ ಕ್ರಮ ಆಗಬೇಕಿದೆ. ಇದಕ್ಕಾಗಿ ಸಮಾನ ಮನಸ್ಕ ಅಡಿಕೆ ಬೆಳೆಗಾರರ ತಂಡ ಹಾಗೂ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಈ ದಿಸೆಯಲ್ಲಿ ವಿಜ್ಞಾನಿಗಳ ತಂಡದೊಂದಿಗೆ ಚರ್ಚೆ ನಡೆಸುತ್ತಿದೆ. ಇದಕ್ಕೆ ಅಧಿಕ ವೆಚ್ಚಗಳೂ ಆಗುವುದರಿಂದ ಸರಕಾರದ ಹಾಗೂ ಸಹಕಾರಿ ಸಂಸ್ಥೆಗಳ ಸಹಕಾರವೂ ಅಗತ್ಯವಿದೆ ಎಂದು ಅಡಿಕೆ ಬೆಳೆಗಾರರ ತಂಡದ ರಮೇಶ್ ದೇಲಂಪಾಡಿ ಹೇಳುತ್ತಾರೆ.ಈ ಯೋಜನೆಯ ಪ್ರಕಾರ, ರೋಗ ನಿರೋಧಕ ತಳಿಗಳನ್ನು ಗುರುತಿಸುವುದು ಮತ್ತು ಅಭಿವೃದ್ಧಿ ಪಡಿಸುವುದು ಮುಖ್ಯ ಉದ್ದೇಶವಾದರೆ, ಈಗ ಗುರುತಿಸಲಾದ ಅಡಿಕೆ ತಳಿಗಳಲ್ಲಿ ಟ್ರಯಾಂಡ್ರಾ ಅಡಿಕೆ ಹೊರತು ಪಡಿಸಿ ಇನ್ನುಳಿದವುಗಳು ರೋಗಕ್ಕೆ ಪ್ರತಿರೋಧ ಒಡ್ಡುವುದಿಲ್ಲ. ಟ್ರಯಾಂಡ್ರಾ ಅಡಿಕೆಯೊಂದಿಗೆ ಇತರ ತಳಿಗಳ ಸಂಕರ ಮಾಡಿ ಹೊಸ ತಳಿಗಳ ಅಭಿವೃದ್ಧಿ ಪಡಿಸಿ ಅವುಗಳಿಗೆ ರೋಗ ನಿರೋಧಕತ್ವ ವರ್ಗಾವಣೆಯಾಗುತ್ತದೆಯೇ ಎಂದು ಪರಿಶೀಲಿಸುವುದು.ಆ ರೀತಿ ರೋಗ ಪ್ರತಿರೋಧಕ ಗುಣವೂ ವರ್ಗಾವಣೆಯಾದ ಹೊಸ ತಳಿ ಸಿಕ್ಕಿದರೆ ಅದರ ಅಡಿಕೆಗೂ ಈ ಗುಣ ವರ್ಗಾವಣೆಯಾಗುತ್ತದೆಯೇ ಎಂದು ಗಮನಿಸ ಬೇಕಾಗುತ್ತದೆ. ಹಳದಿ ಎಲೆ ರೋಗ ಪೀಡಿತ ಪ್ರದೇಶಗಳಲ್ಲಿ ರೋಗ ಪ್ರತಿರೋಧಕ ಗುಣ ಪ್ರದರ್ಶಿಸುತ್ತಿರುವ ಗಿಡಗಳನ್ನು ಗುರುತಿಸಿ ,ಅವುಗಳ ಒಳಗಡೆ ಕೃತಕ ಪರಾಗಸ್ಪರ್ಷದ ಮುಖಾಂತರ ಹೊಸ ಗಿಡಗಳನ್ನು ಪಡೆಯುವುದು.ಪರಾಗ ಸ್ಪರ್ಷಕ್ಕೆ ಬಳಸಿದ ಎರಡೂ ಗಿಡಗಳು ರೋಗ ಪ್ರತಿರೋಧಕ ಗುಣ ಪ್ರದರ್ಶಿಸುವುದೇ ಆಗಿರ ಬೇಕಾಗಿರುವುದರಿಂದ ಅದರಿಂದ ಪಡದ ಅಡಿಕೆಗೂ ಈ ಗುಣ ವರ್ಗಾವಣೆಯಾಗುವ ಸಾಧ್ಯತೆ ಸೈದ್ಧಾಂತಿಕವಾಗಿ ಅತಿ ಹೆಚ್ಚು ಎಂಬುದು ಈ ಹಿಂದೆ ನಡೆದ ಅಧ್ಯಯನದ ವರದಿಯಲ್ಲಿ ಕಂಡುಬಂದಿದೆ ಎನ್ನುತ್ತಾರೆ ರಮೇಶ್ ದೇಲಂಪಾಡಿ.
ಈ ನಡುವೆ ಅಡಿಕೆ ಬೀಜಗಳ ಮೂಲಕವೂ ಹಳದಿ ಎಲೆ ರೋಗ ವಿಸ್ತರಣೆಯಾಗುತ್ತಿದೆಯೇ ಎಂಬುದೂ ಪ್ರಶ್ನೆಯಾಗಿದೆ. ಈಗಾಗಲೇ ಅಡಿಕೆ ಧಾರಣೆ ಉತ್ತಮವಾಗಿರುವ ಕಾರಣದಿಂದ ಗಿಡಗಳ ನಾಟಿಯಾಗುತ್ತಿದೆ. ತಮಿಳುನಾಡು, ಆಂಧ್ರಪ್ರದೇಶ ಸೇರಿದಂತೆ ರಾಜ್ಯದಲ್ಲೂ ಅಡಿಕೆ ಬೆಳೆ ವಿಸ್ತರಣೆಯಾಗುತ್ತಿದೆ. ಹಳದಿ ಎಲೆ ರೋಗ ಅಡಿಕೆಯ ಮೂಲಕವೂ ವಿಸ್ತರಣೆಯಾಗುವುದಾದರೆ ಎಲ್ಲೆಡೆಯೂ ಹಳದಿ ರೋಗ ವಿಸ್ತರಣೆಯ ಆತಂಕ ಇದೆ. ಈಗಾಗಲೇ ಸಿಪಿಸಿಆರ್ ಐ ಮೂಲಕವೇ 1.5 ಲಕ್ಷಕ್ಕೂ ಅಧಿಕ ಗಿಡಗಳು ಹಾಗೂ 2 ಲಕ್ಷಕ್ಕೂ ಅಧಿಕ ಅಡಿಕೆ ಬೀಜಗಳನ್ನು ರೈತರು ಖರೀದಿ ಮಾಡಿದ್ದರೆ ಖಾಸಗಿಯಾಗಿ ಲಕ್ಷಾಂತರ ಅಡಿಕೆ ಗಿಡಗಳು, ಬೀಜಗಳು ಬೆಳೆಗಾರರ ತೋಟಕ್ಕೆ ತಲುಪಿದೆ. ಹೀಗಾಗಿ ಹಳದಿ ರೋಗದ ವಿಸ್ತರಣೆ ಬಗ್ಗೆ ಆತಂಕ. ಇದಕ್ಕಾಗಿ ವಿಶೇಷ ತಳಿಯ ಬಗ್ಗೆ ಅಧ್ಯಯನ ಅಗತ್ಯವಿದೆ.ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…
ಪಶ್ಚಿಮ ಏಷ್ಯಾ ಯುದ್ಧದ ಪರಿಣಾಮದಿಂದ ಭಾರತೀಯ ಟೈರ್ ಉದ್ಯಮಕ್ಕೆ ರಫ್ತು ಮತ್ತು ವೆಚ್ಚದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹ ಬಳಕೆ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ ಎಂದು…
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…