ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ಕೃಷಿ ಇಂದು ಬಹುಮುಖ ಸವಾಲುಗಳನ್ನು ಎದುರಿಸುತ್ತಿದೆ. ಒಂದೆಡೆ ರೋಗಬಾಧೆಯ ಆತಂಕ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ವೈಜ್ಞಾನಿಕ ಕೃಷಿ ಪದ್ಧತಿಗಳ ಮೂಲಕ ಇಳುವರಿ ಹೆಚ್ಚಿಸಿಕೊಳ್ಳುವತ್ತ ಬೆಳೆಗಾರರು ಗಮನ ಹರಿಸುತ್ತಿದ್ದಾರೆ. ಇತ್ತೀಚಿಗೆ ಅಡಿಕೆ ಇಳುವರಿ ಬಗ್ಗೆ “ದ ರೂರಲ್ ಮಿರರ್.ಕಾಂ“ ಸಮೀಕ್ಷೆಯ ಅಂಕಿಅಂಶಗಳು ಈ ಬದಲಾವಣೆಯ ಸ್ಪಷ್ಟ ಚಿತ್ರಣ ನೀಡುತ್ತಿವೆ.
ಸುಮಾರು 113 ಬೆಳೆಗಾರರ ಪ್ರತಿಕ್ರಿಯೆಗಳ ಆಧಾರದ ಮೇಲೆ ನಡೆದ ವಿಶ್ಲೇಷಣೆಯಲ್ಲಿ, ಶೇ.85.8 ರಷ್ಟು ಮಂದಿ ‘ಎಲೆಚುಕ್ಕೆ ರೋಗ’ ಅಡಿಕೆ ತೋಟಗಳ ಅತಿ ದೊಡ್ಡ ಶತ್ರು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರೊಂದಿಗೆ ಹವಾಮಾನ ವೈಪರೀತ್ಯ (69.9%) ಮತ್ತು ಕೊಳೆ ರೋಗ (65.5%) ಕೂಡ ಇಳುವರಿ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.
ಇದಲ್ಲದೆ ಹಳದಿ ಎಲೆ ರೋಗ (19.5%) ಮತ್ತು ಬೇರು ಹುಳು ಬಾಧೆ (10.6%) ಕೂಡ ಬೆಳೆಗಾರರ ಆತಂಕ ಹೆಚ್ಚಿಸುತ್ತಿವೆ. ವಿಶೇಷವೆಂದರೆ, ನೀರಿನ ಅಭಾವದಿಂದ ಇಳುವರಿ ಕಡಿಮೆಯಾಗಿದೆ ಎಂದು ಹೇಳಿದವರ ಪ್ರಮಾಣ ಕೇವಲ 0.9% ಮಾತ್ರವಾಗಿದ್ದು, ಇಂದಿನ ಪರಿಸ್ಥಿತಿಯಲ್ಲಿ ರೋಗ ನಿರ್ವಹಣೆಯೇ ಅಡಿಕೆ ಕೃಷಿಯ ಪ್ರಮುಖ ಸವಾಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.
ಯಶಸ್ವಿ ಬೆಳೆಗಾರರ ಅನುಭವ ಏನು ಹೇಳುತ್ತದೆ? : ಸವಾಲುಗಳ ನಡುವೆಯೂ ಉತ್ತಮ ಇಳುವರಿ ಪಡೆದ 34 ಬೆಳೆಗಾರರ ಅನುಭವಗಳು ಗಮನಾರ್ಹವಾಗಿವೆ. ಇವರಲ್ಲಿ
ಸಕಾಲಿಕ ತೋಟ ನಿರ್ವಹಣೆ (67.6%)
ಸರಿಯಾದ ನೀರಾವರಿ ವ್ಯವಸ್ಥೆ (61.8%)
ಗೊಬ್ಬರವನ್ನು ಸರಿಯಾದ ಸಮಯ ಮತ್ತು ಪ್ರಮಾಣದಲ್ಲಿ ನೀಡುವುದು (50%)
ಮುಖ್ಯ ಯಶಸ್ಸಿನ ಸೂತ್ರಗಳಾಗಿ ಹೊರಹೊಮ್ಮಿವೆ.
ಹಿಂಗಾರ ಅವಧಿಯಲ್ಲಿ ಸಮಯಕ್ಕೆ ಸರಿಯಾಗಿ ಔಷಧಿ ಸಿಂಪಡಣೆ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ ಎಂಬುದನ್ನು ಅರ್ಧದಷ್ಟು ಬೆಳೆಗಾರರು ಒತ್ತಿ ಹೇಳಿದ್ದಾರೆ.
ವೈಜ್ಞಾನಿಕ ಕೃಷಿಯ ಅಗತ್ಯತೆ : ಅಡಿಕೆ ಕೃಷಿಯಲ್ಲಿ ಸ್ಥಿರವಾದ ಇಳುವರಿ ಪಡೆಯಲು ಸಾಂಪ್ರದಾಯಿಕ ಅನುಭವದ ಜೊತೆಗೆ ವೈಜ್ಞಾನಿಕ ದೃಷ್ಟಿಕೋನ ಅತ್ಯಗತ್ಯವಾಗಿದೆ. ಮಣ್ಣು ಪರೀಕ್ಷೆ ಆಧಾರಿತ ಗೊಬ್ಬರ ನಿರ್ವಹಣೆ (14.7%) ಇನ್ನೂ ಹೆಚ್ಚಿನ ಬೆಳೆಗಾರರಲ್ಲಿ ಜಾಗೃತಿ ಮೂಡಿಸಬೇಕಿದೆ.
ಎಲೆಚುಕ್ಕೆ ಹಾಗೂ ಕೊಳೆ ರೋಗಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ತೋಟದ ನಿರ್ವಹಣೆ ಮಾಡಿದರೆ ಮಾತ್ರ ಅಡಿಕೆ ಕೃಷಿಯನ್ನು ದೀರ್ಘಾವಧಿಯಲ್ಲಿ ಲಾಭದಾಯಕವಾಗಿ ಮುಂದುವರಿಸಲು ಸಾಧ್ಯ ಎಂಬುದು ಸಮೀಕ್ಷೆಯ ಸಾರಾಂಶವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
A recent survey indicates that leaf spot disease, rot and climate variability are the major reasons for declining arecanut yields. Farmers who adopted timely garden management, proper irrigation and scientific nutrient practices have achieved better productivity.
ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…
Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…
ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…
ಹೋಟೆಲ್ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…
ಅಡಿಕೆ ಮಾರುಕಟ್ಟೆಯ ಇತ್ತೀಚಿನ ಕುಸಿತ ಜಾಗತಿಕ ರಾಜಕೀಯ ಅನಿಶ್ಚಿತತೆ ಹಾಗೂ ಹಣದ ಹರಿವು…