Advertisement
The Rural Mirror ಫಾಲೋಅಪ್

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

Share

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ಕೃಷಿ ಇಂದು ಬಹುಮುಖ ಸವಾಲುಗಳನ್ನು ಎದುರಿಸುತ್ತಿದೆ. ಒಂದೆಡೆ ರೋಗಬಾಧೆಯ ಆತಂಕ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ವೈಜ್ಞಾನಿಕ ಕೃಷಿ ಪದ್ಧತಿಗಳ ಮೂಲಕ ಇಳುವರಿ ಹೆಚ್ಚಿಸಿಕೊಳ್ಳುವತ್ತ ಬೆಳೆಗಾರರು ಗಮನ ಹರಿಸುತ್ತಿದ್ದಾರೆ. ಇತ್ತೀಚಿಗೆ ಅಡಿಕೆ ಇಳುವರಿ ಬಗ್ಗೆ “ದ ರೂರಲ್‌ ಮಿರರ್.ಕಾಂ ಸಮೀಕ್ಷೆಯ ಅಂಕಿಅಂಶಗಳು ಈ ಬದಲಾವಣೆಯ ಸ್ಪಷ್ಟ ಚಿತ್ರಣ ನೀಡುತ್ತಿವೆ.

ಸುಮಾರು 113 ಬೆಳೆಗಾರರ ಪ್ರತಿಕ್ರಿಯೆಗಳ ಆಧಾರದ ಮೇಲೆ ನಡೆದ ವಿಶ್ಲೇಷಣೆಯಲ್ಲಿ, ಶೇ.85.8 ರಷ್ಟು ಮಂದಿ ‘ಎಲೆಚುಕ್ಕೆ ರೋಗ’ ಅಡಿಕೆ ತೋಟಗಳ ಅತಿ ದೊಡ್ಡ ಶತ್ರು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರೊಂದಿಗೆ ಹವಾಮಾನ ವೈಪರೀತ್ಯ (69.9%) ಮತ್ತು ಕೊಳೆ ರೋಗ (65.5%) ಕೂಡ ಇಳುವರಿ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.

ಇದಲ್ಲದೆ ಹಳದಿ ಎಲೆ ರೋಗ (19.5%) ಮತ್ತು ಬೇರು ಹುಳು ಬಾಧೆ (10.6%) ಕೂಡ ಬೆಳೆಗಾರರ ಆತಂಕ ಹೆಚ್ಚಿಸುತ್ತಿವೆ. ವಿಶೇಷವೆಂದರೆ, ನೀರಿನ ಅಭಾವದಿಂದ ಇಳುವರಿ ಕಡಿಮೆಯಾಗಿದೆ ಎಂದು ಹೇಳಿದವರ ಪ್ರಮಾಣ ಕೇವಲ 0.9% ಮಾತ್ರವಾಗಿದ್ದು, ಇಂದಿನ ಪರಿಸ್ಥಿತಿಯಲ್ಲಿ ರೋಗ ನಿರ್ವಹಣೆಯೇ ಅಡಿಕೆ ಕೃಷಿಯ ಪ್ರಮುಖ ಸವಾಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಯಶಸ್ವಿ ಬೆಳೆಗಾರರ ಅನುಭವ ಏನು ಹೇಳುತ್ತದೆ? : ಸವಾಲುಗಳ ನಡುವೆಯೂ ಉತ್ತಮ ಇಳುವರಿ ಪಡೆದ 34 ಬೆಳೆಗಾರರ ಅನುಭವಗಳು ಗಮನಾರ್ಹವಾಗಿವೆ. ಇವರಲ್ಲಿ

  • ಸಕಾಲಿಕ ತೋಟ ನಿರ್ವಹಣೆ (67.6%)

  • ಸರಿಯಾದ ನೀರಾವರಿ ವ್ಯವಸ್ಥೆ (61.8%)

  • ಗೊಬ್ಬರವನ್ನು ಸರಿಯಾದ ಸಮಯ ಮತ್ತು ಪ್ರಮಾಣದಲ್ಲಿ ನೀಡುವುದು (50%)
    ಮುಖ್ಯ ಯಶಸ್ಸಿನ ಸೂತ್ರಗಳಾಗಿ ಹೊರಹೊಮ್ಮಿವೆ.

ಹಿಂಗಾರ ಅವಧಿಯಲ್ಲಿ ಸಮಯಕ್ಕೆ ಸರಿಯಾಗಿ ಔಷಧಿ ಸಿಂಪಡಣೆ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ ಎಂಬುದನ್ನು ಅರ್ಧದಷ್ಟು ಬೆಳೆಗಾರರು ಒತ್ತಿ ಹೇಳಿದ್ದಾರೆ.

ವೈಜ್ಞಾನಿಕ ಕೃಷಿಯ ಅಗತ್ಯತೆ : ಅಡಿಕೆ ಕೃಷಿಯಲ್ಲಿ ಸ್ಥಿರವಾದ ಇಳುವರಿ ಪಡೆಯಲು ಸಾಂಪ್ರದಾಯಿಕ ಅನುಭವದ ಜೊತೆಗೆ ವೈಜ್ಞಾನಿಕ ದೃಷ್ಟಿಕೋನ ಅತ್ಯಗತ್ಯವಾಗಿದೆ. ಮಣ್ಣು ಪರೀಕ್ಷೆ ಆಧಾರಿತ ಗೊಬ್ಬರ ನಿರ್ವಹಣೆ (14.7%) ಇನ್ನೂ ಹೆಚ್ಚಿನ ಬೆಳೆಗಾರರಲ್ಲಿ ಜಾಗೃತಿ ಮೂಡಿಸಬೇಕಿದೆ.

ಎಲೆಚುಕ್ಕೆ ಹಾಗೂ ಕೊಳೆ ರೋಗಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ತೋಟದ ನಿರ್ವಹಣೆ ಮಾಡಿದರೆ ಮಾತ್ರ ಅಡಿಕೆ ಕೃಷಿಯನ್ನು ದೀರ್ಘಾವಧಿಯಲ್ಲಿ ಲಾಭದಾಯಕವಾಗಿ ಮುಂದುವರಿಸಲು ಸಾಧ್ಯ ಎಂಬುದು ಸಮೀಕ್ಷೆಯ ಸಾರಾಂಶವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A recent survey indicates that leaf spot disease, rot and climate variability are the major reasons for declining arecanut yields. Farmers who adopted timely garden management, proper irrigation and scientific nutrient practices have achieved better productivity.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚೀನಾಕ್ಕೆ ಹಲಸಿನ ಹಣ್ಣು ರಫ್ತು: ಬಾಂಗ್ಲಾದೇಶದ ವಿದೇಶಿ ವಿನಿಮಯ ಆದಾಯ ಹೆಚ್ಚುವ ನಿರೀಕ್ಷೆ

ಚೀನಾಕ್ಕೆ ಹಲಸಿನ ಹಣ್ಣು ರಫ್ತು ಹೆಚ್ಚಿಸುವ ಮೂಲಕ ವಿದೇಶಿ ವಿನಿಮಯ ಆದಾಯವನ್ನು ಹೆಚ್ಚಿಸಲು…

14 minutes ago

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

19 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

23 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago