Advertisement
The Rural Mirror ಫಾಲೋಅಪ್

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

Share

ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಅಡಿಕೆ ಕೃಷಿ ಇಂದು ಬಹುಮುಖ ಸವಾಲುಗಳನ್ನು ಎದುರಿಸುತ್ತಿದೆ. ಒಂದೆಡೆ ರೋಗಬಾಧೆಯ ಆತಂಕ ಹೆಚ್ಚುತ್ತಿದ್ದರೆ, ಮತ್ತೊಂದೆಡೆ ವೈಜ್ಞಾನಿಕ ಕೃಷಿ ಪದ್ಧತಿಗಳ ಮೂಲಕ ಇಳುವರಿ ಹೆಚ್ಚಿಸಿಕೊಳ್ಳುವತ್ತ ಬೆಳೆಗಾರರು ಗಮನ ಹರಿಸುತ್ತಿದ್ದಾರೆ. ಇತ್ತೀಚಿಗೆ ಅಡಿಕೆ ಇಳುವರಿ ಬಗ್ಗೆ “ದ ರೂರಲ್‌ ಮಿರರ್.ಕಾಂ ಸಮೀಕ್ಷೆಯ ಅಂಕಿಅಂಶಗಳು ಈ ಬದಲಾವಣೆಯ ಸ್ಪಷ್ಟ ಚಿತ್ರಣ ನೀಡುತ್ತಿವೆ.

ಸುಮಾರು 113 ಬೆಳೆಗಾರರ ಪ್ರತಿಕ್ರಿಯೆಗಳ ಆಧಾರದ ಮೇಲೆ ನಡೆದ ವಿಶ್ಲೇಷಣೆಯಲ್ಲಿ, ಶೇ.85.8 ರಷ್ಟು ಮಂದಿ ‘ಎಲೆಚುಕ್ಕೆ ರೋಗ’ ಅಡಿಕೆ ತೋಟಗಳ ಅತಿ ದೊಡ್ಡ ಶತ್ರು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದರೊಂದಿಗೆ ಹವಾಮಾನ ವೈಪರೀತ್ಯ (69.9%) ಮತ್ತು ಕೊಳೆ ರೋಗ (65.5%) ಕೂಡ ಇಳುವರಿ ಕುಸಿತಕ್ಕೆ ಪ್ರಮುಖ ಕಾರಣಗಳಾಗಿವೆ.

ಇದಲ್ಲದೆ ಹಳದಿ ಎಲೆ ರೋಗ (19.5%) ಮತ್ತು ಬೇರು ಹುಳು ಬಾಧೆ (10.6%) ಕೂಡ ಬೆಳೆಗಾರರ ಆತಂಕ ಹೆಚ್ಚಿಸುತ್ತಿವೆ. ವಿಶೇಷವೆಂದರೆ, ನೀರಿನ ಅಭಾವದಿಂದ ಇಳುವರಿ ಕಡಿಮೆಯಾಗಿದೆ ಎಂದು ಹೇಳಿದವರ ಪ್ರಮಾಣ ಕೇವಲ 0.9% ಮಾತ್ರವಾಗಿದ್ದು, ಇಂದಿನ ಪರಿಸ್ಥಿತಿಯಲ್ಲಿ ರೋಗ ನಿರ್ವಹಣೆಯೇ ಅಡಿಕೆ ಕೃಷಿಯ ಪ್ರಮುಖ ಸವಾಲಾಗಿದೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ.

ಯಶಸ್ವಿ ಬೆಳೆಗಾರರ ಅನುಭವ ಏನು ಹೇಳುತ್ತದೆ? : ಸವಾಲುಗಳ ನಡುವೆಯೂ ಉತ್ತಮ ಇಳುವರಿ ಪಡೆದ 34 ಬೆಳೆಗಾರರ ಅನುಭವಗಳು ಗಮನಾರ್ಹವಾಗಿವೆ. ಇವರಲ್ಲಿ

  • ಸಕಾಲಿಕ ತೋಟ ನಿರ್ವಹಣೆ (67.6%)

  • ಸರಿಯಾದ ನೀರಾವರಿ ವ್ಯವಸ್ಥೆ (61.8%)

  • ಗೊಬ್ಬರವನ್ನು ಸರಿಯಾದ ಸಮಯ ಮತ್ತು ಪ್ರಮಾಣದಲ್ಲಿ ನೀಡುವುದು (50%)
    ಮುಖ್ಯ ಯಶಸ್ಸಿನ ಸೂತ್ರಗಳಾಗಿ ಹೊರಹೊಮ್ಮಿವೆ.

ಹಿಂಗಾರ ಅವಧಿಯಲ್ಲಿ ಸಮಯಕ್ಕೆ ಸರಿಯಾಗಿ ಔಷಧಿ ಸಿಂಪಡಣೆ ಮಾಡಿದರೆ ಉತ್ತಮ ಫಲಿತಾಂಶ ಸಿಗುತ್ತದೆ ಎಂಬುದನ್ನು ಅರ್ಧದಷ್ಟು ಬೆಳೆಗಾರರು ಒತ್ತಿ ಹೇಳಿದ್ದಾರೆ.

ವೈಜ್ಞಾನಿಕ ಕೃಷಿಯ ಅಗತ್ಯತೆ : ಅಡಿಕೆ ಕೃಷಿಯಲ್ಲಿ ಸ್ಥಿರವಾದ ಇಳುವರಿ ಪಡೆಯಲು ಸಾಂಪ್ರದಾಯಿಕ ಅನುಭವದ ಜೊತೆಗೆ ವೈಜ್ಞಾನಿಕ ದೃಷ್ಟಿಕೋನ ಅತ್ಯಗತ್ಯವಾಗಿದೆ. ಮಣ್ಣು ಪರೀಕ್ಷೆ ಆಧಾರಿತ ಗೊಬ್ಬರ ನಿರ್ವಹಣೆ (14.7%) ಇನ್ನೂ ಹೆಚ್ಚಿನ ಬೆಳೆಗಾರರಲ್ಲಿ ಜಾಗೃತಿ ಮೂಡಿಸಬೇಕಿದೆ.

ಎಲೆಚುಕ್ಕೆ ಹಾಗೂ ಕೊಳೆ ರೋಗಗಳನ್ನು ಆರಂಭಿಕ ಹಂತದಲ್ಲೇ ಗುರುತಿಸಿ, ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ತೋಟದ ನಿರ್ವಹಣೆ ಮಾಡಿದರೆ ಮಾತ್ರ ಅಡಿಕೆ ಕೃಷಿಯನ್ನು ದೀರ್ಘಾವಧಿಯಲ್ಲಿ ಲಾಭದಾಯಕವಾಗಿ ಮುಂದುವರಿಸಲು ಸಾಧ್ಯ ಎಂಬುದು ಸಮೀಕ್ಷೆಯ ಸಾರಾಂಶವಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

A recent survey indicates that leaf spot disease, rot and climate variability are the major reasons for declining arecanut yields. Farmers who adopted timely garden management, proper irrigation and scientific nutrient practices have achieved better productivity.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

4 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

4 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

13 hours ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

17 hours ago

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

1 day ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

1 day ago