Advertisement
MIRROR FOCUS

ಕರಾವಳಿಯಲ್ಲಿ ಅಡಿಕೆ ಕೃಷಿಗೆ ಸಂಕಟ | ಸರ್ಕಾರ ಬಜೆಟ್‌ನಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಗೆ ಒತ್ತಾಯ

Share

ಉತ್ತರ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಈ ಬಾರಿ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಹವಾಮಾನ ವೈಪರೀತ್ಯ ಹಾಗೂ ಎಲೆಚುಕ್ಕಿ (ರೋಗ) ಹಾನಿಯಿಂದ ಇಳುವರಿ ಗಣನೀಯವಾಗಿ ಕುಸಿದ ಹಿನ್ನೆಲೆಯಲ್ಲಿ ಸರ್ಕಾರದಿಂದ ತುರ್ತು ನೆರವು ನೀಡುವಂತೆ ಆಗ್ರಹಿಸಿದ್ದಾರೆ.  ಜಿಲ್ಲೆಯ ಪ್ರಮುಖ ಅಡಿಕೆ ಬೆಳೆಯ ಪ್ರದೇಶಗಳಲ್ಲಿ ಬೆಳೆ ಹಾನಿ ಪ್ರಮಾಣ ಹೆಚ್ಚಿದ್ದು, ಸುಮಾರು 11,803 ಹೆಕ್ಟೇರ್ ಪ್ರದೇಶದ ಅಡಿಕೆ ತೋಟಗಳು ರೋಗದಿಂದ ತೀವ್ರವಾಗಿ ನಲುಗಿವೆ. ಪರಿಣಾಮವಾಗಿ ರೈತರಿಗೆ ಸುಮಾರು ಶೇ.60ರಷ್ಟು ಇಳುವರಿ ಕುಸಿತ ಉಂಟಾಗಿದೆ ಎಂದು ರೈತ ಸಂಘಟನೆಗಳು ತಿಳಿಸಿವೆ.

ಆರ್ಥಿಕ ಸಂಕಷ್ಟಕ್ಕೆ ತಳ್ಳಿದ ಬೆಳೆ ನಷ್ಟ : ಅಡಿಕೆ ಮೇಲೆ ಅವಲಂಬಿತ ಅನೇಕ ಕುಟುಂಬಗಳಿಗೆ ಈ ಬೆಳೆ ನಷ್ಟ ಆರ್ಥಿಕ ಸಂಕಷ್ಟವನ್ನು ತಂದೊಡ್ಡಿದೆ. ರೋಗ ನಿಯಂತ್ರಣಕ್ಕೆ ರೈತರು ಹಲವು ಬಾರಿ ಔಷಧಿ ಸಿಂಪಡಿಸಿದ್ದರೂ ನಿರಂತರ ಹವಾಮಾನ ಬದಲಾವಣೆಗಳಿಂದ ಪ್ರಯೋಜನ ಕಡಿಮೆಯಾಗಿದೆ.  ಈ ಹಿನ್ನೆಲೆಯಲ್ಲಿ ಸರ್ಕಾರ ವಿಶೇಷ ಸಮೀಕ್ಷೆ ನಡೆಸಿ ಬೆಳೆ ನಷ್ಟದ ಪರಿಹಾರ ಘೋಷಿಸಬೇಕು ಎಂದು ರೈತರು ಒತ್ತಾಯಿಸುತ್ತಿದ್ದಾರೆ.

ವಿಮಾ ಪರಿಹಾರ ಕಳೆದುಕೊಳ್ಳುತ್ತಿರುವ ರೈತರು :  ಮಳೆ ಮಾಪನ ಕೇಂದ್ರಗಳ ದುಸ್ಥಿತಿಯಿಂದ ಜಿಲ್ಲೆಯ ರೈತರು ಪ್ರತಿ ವರ್ಷ ₹70–80 ಕೋಟಿ ಮೊತ್ತದ ಬೆಳೆವಿಮೆ ಪರಿಹಾರದಿಂದ ವಂಚಿತರಾಗುತ್ತಿದ್ದಾರೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಸಮೀಕ್ಷೆ–ಪರಿಹಾರ ಘೋಷಣೆಗೆ ಒತ್ತಾಯ : ರೈತರ ಪ್ರಕಾರ, ಹಾನಿಯ ಪ್ರಮಾಣವನ್ನು ವೈಜ್ಞಾನಿಕವಾಗಿ ಅಂದಾಜಿಸಿ ತಕ್ಷಣ ಪರಿಹಾರ ಬಿಡುಗಡೆ ಮಾಡುವುದು ಅನಿವಾರ್ಯ. ಇಲ್ಲದಿದ್ದರೆ ಅಡಿಕೆ ಕೃಷಿ ಆಧಾರಿತ ಗ್ರಾಮೀಣ ಆರ್ಥಿಕತೆ ತೀವ್ರ ಹೊಡೆತ ಅನುಭವಿಸಲಿದೆ.  ಇದೇ ರೀತಿಯ ಸಮಸ್ಯೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲೂ ಕಂಡುಬರುತ್ತಿದ್ದು, ಸರ್ಕಾರ ತುರ್ತು ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಸಂಘಟನೆಗಳು ಒತ್ತಾಯಿಸಿವೆ.

ಮೂಲ ವರದಿ: ಪ್ರಜಾವಾಣಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

2 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

2 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

2 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

3 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago