ಕರ್ನಾಟಕ ಮತ್ತು ಇತರ ರಾಜ್ಯಗಳಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗದ ಸಮಸ್ಯೆಯನ್ನು ವಿಶ್ಲೇಷಿಸಲು ಮತ್ತು ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ವೈಜ್ಞಾನಿಕ ಅಧ್ಯಯನವನ್ನು ಕೈಗೊಳ್ಳಲು ತಜ್ಞರ ಸಮಿತಿಯನ್ನು ರಚಿಸಿ ಇಂದು ಕೇಂದ್ರ ಕೃಷಿ ಸಚಿವಾಲಯ ಆದೇಶವನ್ನು ಹೊರಡಿಸಿದೆ.
Advertisement
ಆಗಸ್ಟ್ ತಿಂಗಳಲ್ಲಿ ಕೇಂದ್ರ ಕೃಷಿ ಕಾರ್ಯದರ್ಶಿಗಳು ಹಾಗೂ ಸಿಪಿಸಿಆರ್ ವಿಜ್ಞಾನಿಗಳು, ತೋಟಗಾರಿಕಾ ಇಲಾಖಾ ಅಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳ ಸಮ್ಮುಖದಲ್ಲಿ ನಡೆಸಿದ ಸಭೆಯ ನಿರ್ಣಯದಂತೆ ಹಾಗೂ ಕೇಂದ್ರ ಕೃಷಿ ಸಚಿವರಾದ ನರೇಂದ್ರ ಸಿಂಗ್ ತೋಮರ್ ಅವರ ನಿರ್ದೇಶನದಂತೆ ಇಂದು ತಜ್ಞರ ಸಮಿತಿಯನ್ನು ಸ್ಥಾಪಿಸಲಾಗಿದೆ.
Advertisement
ಈ ತಜ್ಞರ ಸಮಿತಿಯು ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಮತ್ತು ಇತರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಶ್ರಮಿಸಲಿದೆ ಎಂದು ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement