Advertisement
MIRROR FOCUS

ಅಡಿಕೆ ಹಳದಿ ಎಲೆ ರೋಗ | ರೋಗ ಹರಡುವ ಕೀಟ ಯಾವುದು ಗೊತ್ತಾ ? |

Share

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಶೃಂಗೇರಿ, ಕೊಪ್ಪ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆ ರೋಗದ ಬಾಧೆ ಅಡಿಕೆ ಕೃಷಿಕರನ್ನು ಕಾಡುತ್ತಿದೆ. ಹಳದಿ ಎಲೆ ರೋಗವು ಫೈಟೋಪ್ಲಾಸ್ಮಾ ಎಂಬ ವೈರಸ್‌ನಿಂದ ಬರುತ್ತದೆ. ಆದರೆ ಈ ವೈರಸ್‌ ಹರಡುವ ವಾಹಕವಾಗಿ ಪ್ರೊಟಿಸ್ಟಾ ಮೋಯಿಸ್ಟಾ ಎಂಬ ಕೀಟ ಎಂದು ವಿಜ್ಞಾನಿಗಳು ಹೇಳುತ್ತಿದ್ದರು. ಇದೀಗ ಈ ಕೀಟವನ್ನು ಕೃಷಿಕ ರಮೇಶ್‌ ದೇಲಂಪಾಡಿ ಪರಿಚಯಿಸಿದ್ದಾರೆ. ಅವರ ತೋಟದಲ್ಲಿ ಕಂಡುಬಂದ ಕೀಟದ ಫೋಟೋ ತೆಗೆದಿದ್ದಾರೆ. ವಿಜ್ಞಾನಿಗಳೂ ಈ ಕೀಟದ ಬಗ್ಗೆ ಖಚಿತಪಡಿಸಿದ್ದಾರೆ.

ಅಡಿಕೆಯ ಹಳದಿ ಎಲೆ ರೋಗ ಫೈಟೋಪ್ಲಾಸ್ಮಾದಿಂದ ಬರುತ್ತದೆ ಹಾಗೂ ಈ ವೈರಸ್‌ ಹರಡುವುದು ಕೀಟ. ಈ ಕೀಟವು ಮಳೆಗಾಲದ ಹೊತ್ತಿಗೆ ಗುಂಪಾಗಿ ಇರುತ್ತದೆ. ಅಡಿಕೆ ಮರದ ಅಥವಾ ಗಿಡ ಸೋಗೆಯಲ್ಲಿ ಕುಳಿತು ರಸ ಹೀರುತ್ತವೆ. ಹೀಗೆ ರಸ ಹೀರಿವ ಕೀಟವು ಇನ್ನೊಂದು ಮರಕ್ಕೆ ಹಾರುತ್ತದೆ. ಆ ಮರದಲ್ಲೂ ರಸ ಹೀರುತ್ತವೆ. ಆದರೆ ಒಂದು ವೇಳೆ ಹಳದಿ ಎಲೆ ರೋಗ ಇರುವ ಅಡಿಕೆ ಮರದಲ್ಲಿ ರಸ ಹೀರಿದ್ದರೆ ವೈರಸ್‌ ಇನ್ನೊಂದು ಮರಕ್ಕೆ ವರ್ಗಾವಣೆಯಾಗುತ್ತದೆ. ಹೀಗೇ ಹಳದಿ ಎಲೆ ರೋಗ ಹರಡುತ್ತದೆ ಎಂದು ವಿಜ್ಞಾನಿಗಳು ಹಿಂದೆ ಹೇಳಿದ್ದರು. ಆದರೆ ಇದೀಗ ಈ ಕೀಟವು ತೋಟದಲ್ಲಿ ಪತ್ತೆಯಾಗಿದೆ. ಕೃಷಿಕ ರಮೇಶ್‌ ದೇಲಂಪಾಡಿ ಅವರು ತಮ್ಮ ತೋಟದಲ್ಲಿ ಗಮನಿಸಿದ ಈ ಕೀಟದ ಫೋಟೊ ತೆಗೆದು ವಿಜ್ಞಾನಿಗಳಿಗೆ ಕಳುಹಿಸಿದಾಗ ಖಚಿತ ಪಡಿಸಿದ್ದಾರೆ. ಇಂತಹ ಕೀಟಗಳೇ ವೈರಸ್‌ ವಾಹಕಗಳು ಎಂದಿದ್ದಾರೆ.

ಈ ಪ್ರೊಟಿಸ್ಟಾ ಮೋಯಿಸ್ಟಾ ಕೀಟದ ಗಾತ್ರ ಕೇವಲ ಸೊಳ್ಳೆಯಷ್ಟು ಅಥವಾ ಅದಕ್ಕಿಂತಲೂ ಸಣ್ಣ. ವಿಜ್ಞಾನದ ಪ್ರಕಾರ ಇದರ ಜೀವಿತಾವಧಿ ಕೇವಲ ಒಂದು ತಿಂಗಳು. ತೋಟದಲ್ಲಿ ಇದರ ಸಂಖ್ಯೆಯಲ್ಲಿ ಏರುಪೇರು ಆಗುತ್ತಿರುತ್ತದೆ.ಇದಕ್ಕೆ ಮುಖ್ಯ ಕಾರಣ ಇದರ ನೈಸರ್ಗಿಕ ಶತ್ರುಗಳು.ಈ ನೈಸರ್ಗಿಕ ಶತ್ರುಗಳ ಸಂಖ್ಯೆ ಮಳೆಗಾಲ ಆರಂಭವಾಗುತ್ತಿದ್ದಂತೇ ಕಡಿಮೆಯಾಗುತ್ತದೆ ಮತ್ತು ಮಳೆಗಾಲ ಮುಗಿಯುತ್ತಿದ್ದಂತೇ ಹೆಚ್ಚಾಗುತ್ತದೆ .

ತೋಟದಲ್ಲಿ ಈ ಬಗೆಯ ಕೀಟ ಕಂಡುಬಂತು ಅಂದಾಕ್ಷಣ ಹಳದಿ ಎಲೆ ರೋಗ ಬಂದೇ ಬಿಟ್ಟಿತು ಎನ್ನಲಾಗುವುದಿಲ್ಲ ಎಂದು ಕೃಷಿಕ ರಮೇಶ್‌ ದೇಲಂಪಾಡಿ ಹೇಳುತ್ತಾರೆ. ರೋಗ ಅಥವಾ ವೈರಸ್‌ ಈ ಕೀಟದಲ್ಲಿ ದೇಹದಲ್ಲಿ ಇದ್ದರೆ ಮಾತ್ರಾ ವರ್ಗಾವಣೆಯಾಗುತ್ತದೆ. ರೋಗ ಪಸರುಸುವಿಕೆ ಭಾರೀ ನಿಧಾನ ಎಂಬುದು ಈ ತನಕದ ಅಧ್ಯಯನ . ರೋಗ ಇದ್ದೆಡೆ ಇಂತಹ ಕೀಟಗಳು ಕಂಡುಬಂದರೆ ನಿಯಂತ್ರಣದ ಕಡೆಗೆ ಗಮನಿಸಿದರೆ ಹಳದಿ ಎಲೆ ರೋಗ ಹರಡುವಿಕೆಗೆ ಕಡಿವಾಣ ಹಾಕಬಹುದು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಗಾಲದ ಪರಿಸರದ ಸೊಬಗು ಜಲವರ್ಣದಲ್ಲಿ ಸೆರೆ – ಗುತ್ತಿಗಾರಿನಲ್ಲಿ ಮೂರು ದಿನಗಳ ‘ಮಾನ್ಸೂನ್ ಕಲರ್ಸ್’ ಚಿತ್ರಕಲಾ ಶಿಬಿರ

ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…

3 minutes ago

ಹಳ್ಳಿಗಳನ್ನು ಪರಿವರ್ತಿಸಲು ಹಸುವಿನ ಸಗಣಿ – ಗೋಮಯದಿಂದ ಗ್ರಾಮಗಳ ಆರ್ಥಿಕ ಕ್ರಾಂತಿ..!

ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…

2 hours ago

ಕಾಫಿ ಬೆಲೆ ಗರಿಗೆದರಿಕೆ- ಬ್ರೆಜಿಲ್‌ನಲ್ಲಿ ನಿರಂತರ ಮಳೆಯಿಂದ ಜಾಗತಿಕ ಮಾರುಕಟ್ಟೆಯಲ್ಲಿ ಏರಿಕೆ

ಬ್ರೆಜಿಲ್‌ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…

7 hours ago

ಹವಾಮಾನ ವರದಿ | 08-07-2026 | ಕರ್ನಾಟಕದಲ್ಲಿ ಮಳೆ ಇಳಿಮುಖ – ರೈತರಿಗೆ ಮಹತ್ವದ ಹವಾಮಾನ ಮಾಹಿತಿ..!

ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…

10 hours ago

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

10 hours ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

1 day ago