Advertisement
MIRROR FOCUS

ಅಡಿಕೆ ಹಳದಿ ಎಲೆ ರೋಗ | ರೋಗ ಹರಡುವ ಕೀಟ ಯಾವುದು ಗೊತ್ತಾ ? |

Share

ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ಶೃಂಗೇರಿ, ಕೊಪ್ಪ ಪ್ರದೇಶಗಳಲ್ಲೂ ಅಡಿಕೆ ಹಳದಿ ಎಲೆ ರೋಗದ ಬಾಧೆ ಅಡಿಕೆ ಕೃಷಿಕರನ್ನು ಕಾಡುತ್ತಿದೆ. ಹಳದಿ ಎಲೆ ರೋಗವು ಫೈಟೋಪ್ಲಾಸ್ಮಾ ಎಂಬ ವೈರಸ್‌ನಿಂದ ಬರುತ್ತದೆ. ಆದರೆ ಈ ವೈರಸ್‌ ಹರಡುವ ವಾಹಕವಾಗಿ ಪ್ರೊಟಿಸ್ಟಾ ಮೋಯಿಸ್ಟಾ ಎಂಬ ಕೀಟ ಎಂದು ವಿಜ್ಞಾನಿಗಳು ಹೇಳುತ್ತಿದ್ದರು. ಇದೀಗ ಈ ಕೀಟವನ್ನು ಕೃಷಿಕ ರಮೇಶ್‌ ದೇಲಂಪಾಡಿ ಪರಿಚಯಿಸಿದ್ದಾರೆ. ಅವರ ತೋಟದಲ್ಲಿ ಕಂಡುಬಂದ ಕೀಟದ ಫೋಟೋ ತೆಗೆದಿದ್ದಾರೆ. ವಿಜ್ಞಾನಿಗಳೂ ಈ ಕೀಟದ ಬಗ್ಗೆ ಖಚಿತಪಡಿಸಿದ್ದಾರೆ.

ಅಡಿಕೆಯ ಹಳದಿ ಎಲೆ ರೋಗ ಫೈಟೋಪ್ಲಾಸ್ಮಾದಿಂದ ಬರುತ್ತದೆ ಹಾಗೂ ಈ ವೈರಸ್‌ ಹರಡುವುದು ಕೀಟ. ಈ ಕೀಟವು ಮಳೆಗಾಲದ ಹೊತ್ತಿಗೆ ಗುಂಪಾಗಿ ಇರುತ್ತದೆ. ಅಡಿಕೆ ಮರದ ಅಥವಾ ಗಿಡ ಸೋಗೆಯಲ್ಲಿ ಕುಳಿತು ರಸ ಹೀರುತ್ತವೆ. ಹೀಗೆ ರಸ ಹೀರಿವ ಕೀಟವು ಇನ್ನೊಂದು ಮರಕ್ಕೆ ಹಾರುತ್ತದೆ. ಆ ಮರದಲ್ಲೂ ರಸ ಹೀರುತ್ತವೆ. ಆದರೆ ಒಂದು ವೇಳೆ ಹಳದಿ ಎಲೆ ರೋಗ ಇರುವ ಅಡಿಕೆ ಮರದಲ್ಲಿ ರಸ ಹೀರಿದ್ದರೆ ವೈರಸ್‌ ಇನ್ನೊಂದು ಮರಕ್ಕೆ ವರ್ಗಾವಣೆಯಾಗುತ್ತದೆ. ಹೀಗೇ ಹಳದಿ ಎಲೆ ರೋಗ ಹರಡುತ್ತದೆ ಎಂದು ವಿಜ್ಞಾನಿಗಳು ಹಿಂದೆ ಹೇಳಿದ್ದರು. ಆದರೆ ಇದೀಗ ಈ ಕೀಟವು ತೋಟದಲ್ಲಿ ಪತ್ತೆಯಾಗಿದೆ. ಕೃಷಿಕ ರಮೇಶ್‌ ದೇಲಂಪಾಡಿ ಅವರು ತಮ್ಮ ತೋಟದಲ್ಲಿ ಗಮನಿಸಿದ ಈ ಕೀಟದ ಫೋಟೊ ತೆಗೆದು ವಿಜ್ಞಾನಿಗಳಿಗೆ ಕಳುಹಿಸಿದಾಗ ಖಚಿತ ಪಡಿಸಿದ್ದಾರೆ. ಇಂತಹ ಕೀಟಗಳೇ ವೈರಸ್‌ ವಾಹಕಗಳು ಎಂದಿದ್ದಾರೆ.

ಈ ಪ್ರೊಟಿಸ್ಟಾ ಮೋಯಿಸ್ಟಾ ಕೀಟದ ಗಾತ್ರ ಕೇವಲ ಸೊಳ್ಳೆಯಷ್ಟು ಅಥವಾ ಅದಕ್ಕಿಂತಲೂ ಸಣ್ಣ. ವಿಜ್ಞಾನದ ಪ್ರಕಾರ ಇದರ ಜೀವಿತಾವಧಿ ಕೇವಲ ಒಂದು ತಿಂಗಳು. ತೋಟದಲ್ಲಿ ಇದರ ಸಂಖ್ಯೆಯಲ್ಲಿ ಏರುಪೇರು ಆಗುತ್ತಿರುತ್ತದೆ.ಇದಕ್ಕೆ ಮುಖ್ಯ ಕಾರಣ ಇದರ ನೈಸರ್ಗಿಕ ಶತ್ರುಗಳು.ಈ ನೈಸರ್ಗಿಕ ಶತ್ರುಗಳ ಸಂಖ್ಯೆ ಮಳೆಗಾಲ ಆರಂಭವಾಗುತ್ತಿದ್ದಂತೇ ಕಡಿಮೆಯಾಗುತ್ತದೆ ಮತ್ತು ಮಳೆಗಾಲ ಮುಗಿಯುತ್ತಿದ್ದಂತೇ ಹೆಚ್ಚಾಗುತ್ತದೆ .

ತೋಟದಲ್ಲಿ ಈ ಬಗೆಯ ಕೀಟ ಕಂಡುಬಂತು ಅಂದಾಕ್ಷಣ ಹಳದಿ ಎಲೆ ರೋಗ ಬಂದೇ ಬಿಟ್ಟಿತು ಎನ್ನಲಾಗುವುದಿಲ್ಲ ಎಂದು ಕೃಷಿಕ ರಮೇಶ್‌ ದೇಲಂಪಾಡಿ ಹೇಳುತ್ತಾರೆ. ರೋಗ ಅಥವಾ ವೈರಸ್‌ ಈ ಕೀಟದಲ್ಲಿ ದೇಹದಲ್ಲಿ ಇದ್ದರೆ ಮಾತ್ರಾ ವರ್ಗಾವಣೆಯಾಗುತ್ತದೆ. ರೋಗ ಪಸರುಸುವಿಕೆ ಭಾರೀ ನಿಧಾನ ಎಂಬುದು ಈ ತನಕದ ಅಧ್ಯಯನ . ರೋಗ ಇದ್ದೆಡೆ ಇಂತಹ ಕೀಟಗಳು ಕಂಡುಬಂದರೆ ನಿಯಂತ್ರಣದ ಕಡೆಗೆ ಗಮನಿಸಿದರೆ ಹಳದಿ ಎಲೆ ರೋಗ ಹರಡುವಿಕೆಗೆ ಕಡಿವಾಣ ಹಾಕಬಹುದು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

8 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

10 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

10 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

13 hours ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

1 day ago