ಅಡಿಕೆ ಎಲೆಚುಕ್ಕಿ ರೋಗ | ಶೃಂಗೇರಿ , ತೀರ್ಥಹಳ್ಳಿಗೆ ಭೇಟಿ ನೀಡಿದ ಕೇಂದ್ರ ವೈಜ್ಞಾನಿಕ ತಂಡ | ಸಚಿವರ ಜೊತೆ ಸಭೆ |

November 22, 2022
1:59 PM

ಅಡಿಕೆಗೆ ಬಾಧಿಸುತ್ತಿರುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ಕೇಂದ್ರ ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯ ತಂಡವು ಶೃಂಗೇರಿ, ಕಳಸ, ಸಂಸೆ, ತೀರ್ಥಹಳ್ಳಿಯ ವಿವಿಧ ತೋಟಗಳಿಗೆ ತೆರಳಿ ಹಳದಿ ಎಲೆರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಮಾಹಿತಿ ಪಡೆಯಿತು. ಇದೇ ವೇಳೆ ತೀರ್ಥಹಳ್ಳಿಯಲ್ಲಿ ಅಡಿಕೆ ಟಾಸ್ಕ್‌ಫೋರ್ಸ್‌ ಸಮಿತಿ ಅಧ್ಯಕ್ಷ, ಸಚಿವ ಅರಗ ಜ್ಞಾನೇಂದ್ರ ಅವರು ತಂಡದ ಜೊತೆ ಸಭೆ ನಡೆಸಿ ಮಾಹಿತಿ ಪಡೆದರು.

ಕೇಂದ್ರ ಮಟ್ಟದ ಈ ಸಮಿತಿಯು ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗ ಕುರಿತು ಮಾಹಿತಿ ಸಂಗ್ರಹಿಸಿ, ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ಹಳದಿ ಎಲೆರೋಗ ಹಾಗೂ ಎಲೆಚುಕ್ಕೆ ರೋಗದಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದು, ಎರಡೂ ಬಾಧಿಸಿರುವ ತೋಟಗಳಲ್ಲಿ ರೋಗ ಗುರುತಿಸಿವುದು ಕೃಷಿಕರಿಗೆ ಕಷ್ಟವಾಗುತ್ತಿದೆ. ಸದ್ಯ ಪರಿಹಾರದ  ಮಾಹಿತಿ ನೀಡಿಲ್ಲ, ಆದರೆ ಇದುವರೆಗೂ ನೀಡಲಾಗುತ್ತಿದ್ದ ಸಲಹೆಯನ್ನು ಕೃಷಿಕರಿಗೆ ಈ ತಂಡವು ನೀಡಿದೆ.

ಸಭೆಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ  ಡಿ.ಎನ್.ಜೀವರಾಜ್ , ಸಾವಯವ ಮಿಶನ್‌ನ ಆ ಶ್ರೀ ಆನಂದ, ಸಿ. ಪಿ.ಸಿ ಆರ್.ಐ., ಕಾಸರಗೋಡಿನ ಪ್ರಭಾರ ನಿರ್ದೇಶಕ ಡಾ. ಮುರಳೀಧರನ್, ಕಲ್ಲಿಕೋಟೆಯ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ. ಹೋಮಿ ಚೆರಿಯನ್, ಸಿ.ಪಿ.ಸಿ.ಆರ್.ಐ. ಕಾಸರಗೋಡಿನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಹೆಗ್ಡೆ ಮೊದಲಾದವರು ಇದ್ದರು.

This slideshow requires JavaScript.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ
June 17, 2026
11:49 AM
by: ಸಾಯಿಶೇಖರ್ ಕರಿಕಳ
ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ
June 17, 2026
11:39 AM
by: ದ ರೂರಲ್ ಮಿರರ್.ಕಾಂ
ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ
June 16, 2026
8:15 PM
by: ದ ರೂರಲ್ ಮಿರರ್.ಕಾಂ
ಬಿಡದಿ ಟೌನ್‌ಶಿಪ್‌ಗೆ 2 ಲಕ್ಷಕ್ಕೂ ಹೆಚ್ಚು ಮರಗಳ ಕತ್ತರಿ…? – ಯೋಜನೆಗೆ ಪರಿಸರವಾದಿಗಳು, ರೈತರಿಂದ ತೀವ್ರ ವಿರೋಧ
June 16, 2026
7:33 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror