ಅಡಿಕೆ ರೋಗ ಅಧ್ಯಯನ ಸಮಿತಿ ಸುಳ್ಯ ಭೇಟಿ | ಮರ್ಕಂಜದಲ್ಲಿ ತೋಟಗಳಿಗೆ ಭೇಟಿ ನೀಡಿದ ತಂಡ | ಕೃಷಿಕರಿಂದ ಮಾಹಿತಿ ಸಂಗ್ರಹ |

November 20, 2022
9:12 PM

ಅಡಿಕೆಗೆ ಬಾಧಿಸುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಸದಸ್ಯರು  ಸುಳ್ಯ ತಾಲೂಕಿನ ಮರ್ಕಂಜ ಮತ್ತು ರೆಂಜಾಳದ  ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗ ಪೀಡಿತ ಅಡಿಕೆ ತೋಟಗಳಿಗೆ ಭಾನುವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಕೇಂದ್ರ ಮಟ್ಟದ ಸಮಿತಿಯು ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗ ಕುರಿತು ಮಾಹಿತಿ ಸಂಗ್ರಹಿಸಿ, ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ನಾಳೆ ಶೃಂಗೇರಿ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ನೀಡಲಿದೆ ಈ ತಂಡ.

ಭಾನುವಾರ ಮರ್ಕಂಜದ ಮಾಪಲತೋಟ , ಬಲ್ಕಾಡಿಮತ್ತು ದಾಸರ ಬೈಲು ಪ್ರದೇಶದ ಕೃಷಿಕರ ತೋಟಕ್ಕೆ ಭೇಟಿ ನೀಡಿದ ತಂಡವು ಅಡಿಕ ಸೋಗೆ, ಅಡಿಕೆ ಮರ ಹಾಗೂ ಅಡಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡಿದೆ.ಹಳದಿ ಎಲೆ ರೋಗ ಮತ್ತು‌ ಎಲೆ ಚುಕ್ಕಿ ರೋಗ ಎರಡೂ ಒಂದೇ ತೋಟದಲ್ಲಿ ಇದ್ದಾಗ ಅವುಗಳನ್ನು ಪ್ರತ್ಯೇಕಿಸಿ ಗುರುತಿಸಲು ಕಷ್ಟವಾಗುವುದರ ಬಗ್ಗೆ ಕೃಷಿಕರೂ ಮಾಹಿತಿ ನೀಡಿದರು.

ಈ ಸಂದರ್ಭ ಸಿ. ಪಿ.ಸಿ ಆರ್.ಐ., ಕಾಸರಗೋಡಿನ ಪ್ರಭಾರ ನಿರ್ದೇಶಕ ಡಾ. ಮುರಳೀಧರನ್, ಕಲ್ಲಿಕೋಟೆಯ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ. ಹೋಮಿ ಚೆರಿಯನ್, ಸಿ.ಪಿ.ಸಿ.ಆರ್.ಐ. ಕಾಸರಗೋಡಿನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಹೆಗ್ಡೆ, ತೋಟಗಾರಿಕೆ ಉಪ ನಿರ್ದೇಶಕ ಡಾ. ಎಚ್. ಆರ್. ನಾಯ್ಕ್  ತಂಡದಲ್ಲಿದ್ದರು. ಸುಳ್ಯ ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು, ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳು, ಮರ್ಕಂಜ ಸೊಸೈಟಿಯ ಮುಖ್ಯಸ್ಥರು ಮತ್ತು ಸ್ಥಳೀಯ ಕೃಷಿಕರು ಜೊತೆಗಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!
April 3, 2026
11:59 AM
by: ದ ರೂರಲ್ ಮಿರರ್.ಕಾಂ
ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!
April 3, 2026
8:00 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು
April 2, 2026
1:52 PM
by: ಸಾಯಿಶೇಖರ್ ಕರಿಕಳ
ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು

You cannot copy content of this page - Copyright -The Rural Mirror