Advertisement
MIRROR FOCUS

ಅಡಿಕೆ ರೋಗ ಅಧ್ಯಯನ ಸಮಿತಿ ಸುಳ್ಯ ಭೇಟಿ | ಮರ್ಕಂಜದಲ್ಲಿ ತೋಟಗಳಿಗೆ ಭೇಟಿ ನೀಡಿದ ತಂಡ | ಕೃಷಿಕರಿಂದ ಮಾಹಿತಿ ಸಂಗ್ರಹ |

Share

ಅಡಿಕೆಗೆ ಬಾಧಿಸುವ ಹಳದಿ ಎಲೆ ರೋಗ ಮತ್ತು ಎಲೆ ಚುಕ್ಕೆ ರೋಗದ ಕುರಿತು ಅಧ್ಯಯನ ಮಾಡಲು ವೈಜ್ಞಾನಿಕ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿ ಸದಸ್ಯರು  ಸುಳ್ಯ ತಾಲೂಕಿನ ಮರ್ಕಂಜ ಮತ್ತು ರೆಂಜಾಳದ  ಎಲೆಚುಕ್ಕೆ ಮತ್ತು ಹಳದಿ ಎಲೆ ರೋಗ ಪೀಡಿತ ಅಡಿಕೆ ತೋಟಗಳಿಗೆ ಭಾನುವಾರ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಕೇಂದ್ರ ಮಟ್ಟದ ಸಮಿತಿಯು ಎಲೆ ಚುಕ್ಕೆ ರೋಗ ಮತ್ತು ಹಳದಿ ಎಲೆ ರೋಗ ಕುರಿತು ಮಾಹಿತಿ ಸಂಗ್ರಹಿಸಿ, ಅಧ್ಯಯನ ಮಾಡಿ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ. ನಾಳೆ ಶೃಂಗೇರಿ ಸೇರಿದಂತೆ ವಿವಿಧ ಕಡೆಗಳಿಗೆ ಭೇಟಿ ನೀಡಲಿದೆ ಈ ತಂಡ.

ಭಾನುವಾರ ಮರ್ಕಂಜದ ಮಾಪಲತೋಟ , ಬಲ್ಕಾಡಿಮತ್ತು ದಾಸರ ಬೈಲು ಪ್ರದೇಶದ ಕೃಷಿಕರ ತೋಟಕ್ಕೆ ಭೇಟಿ ನೀಡಿದ ತಂಡವು ಅಡಿಕ ಸೋಗೆ, ಅಡಿಕೆ ಮರ ಹಾಗೂ ಅಡಿಕೆಯ ಬಗ್ಗೆ ಮಾಹಿತಿ ಪಡೆದುಕೊಂಡಿದೆ.ಹಳದಿ ಎಲೆ ರೋಗ ಮತ್ತು‌ ಎಲೆ ಚುಕ್ಕಿ ರೋಗ ಎರಡೂ ಒಂದೇ ತೋಟದಲ್ಲಿ ಇದ್ದಾಗ ಅವುಗಳನ್ನು ಪ್ರತ್ಯೇಕಿಸಿ ಗುರುತಿಸಲು ಕಷ್ಟವಾಗುವುದರ ಬಗ್ಗೆ ಕೃಷಿಕರೂ ಮಾಹಿತಿ ನೀಡಿದರು.

ಈ ಸಂದರ್ಭ ಸಿ. ಪಿ.ಸಿ ಆರ್.ಐ., ಕಾಸರಗೋಡಿನ ಪ್ರಭಾರ ನಿರ್ದೇಶಕ ಡಾ. ಮುರಳೀಧರನ್, ಕಲ್ಲಿಕೋಟೆಯ ಅಡಿಕೆ ಮತ್ತು ಸಾಂಬಾರು ಬೆಳೆಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ. ಹೋಮಿ ಚೆರಿಯನ್, ಸಿ.ಪಿ.ಸಿ.ಆರ್.ಐ. ಕಾಸರಗೋಡಿನ ಬೆಳೆ ಸಂರಕ್ಷಣಾ ವಿಭಾಗದ ಮುಖ್ಯಸ್ಥ ಡಾ. ವಿನಾಯಕ ಹೆಗ್ಡೆ, ತೋಟಗಾರಿಕೆ ಉಪ ನಿರ್ದೇಶಕ ಡಾ. ಎಚ್. ಆರ್. ನಾಯ್ಕ್  ತಂಡದಲ್ಲಿದ್ದರು. ಸುಳ್ಯ ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳು, ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳು, ಮರ್ಕಂಜ ಸೊಸೈಟಿಯ ಮುಖ್ಯಸ್ಥರು ಮತ್ತು ಸ್ಥಳೀಯ ಕೃಷಿಕರು ಜೊತೆಗಿದ್ದರು.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

13 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

22 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

22 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago