ಅಡಿಕೆ ಹಳದಿ ಎಲೆ ರೋಗದ ಬಗ್ಗೆ ಚಳಿಗಾಲದ ಅಧಿವೇಶನದ ಸದನದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗಮನ ಸೆಳೆದರು. ಪುತ್ತೂರು ಶಾಸಕ ಸಂಜೀವ ಮಟಂದೂರು ಅವರು ಸಾತ್ ನೀಡಿದರು. ಅಡಿಕೆ ಹಳದಿ ರೋಗ ಪರಿಹಾರ ಹಾಗೂ ಸಂಶೋಧನೆಗೆ ಮೂರು ಕೋಟಿ ರೂಪಾಯಿ ಅನುದಾನವನ್ನು ಎ ಆರ್ ಡಿ ಎಫ್ ಗೆ ನೀಡಬೇಕು ಎಂಬ ಒತ್ತಾಯವನ್ನೂ ಮಾಡಿದ್ದಾರೆ. ವಿಷಯ ಗಮನದ ಬಳಿಕ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ ಸರ್ಕಾರದ ಪರವಾಗಿ ಮಾತನಾಡಿದ ಮುನಿರತ್ನ ಅವರು 16 ಕೋಟಿ ಪರ್ಯಾಯ ಬೆಳೆಗೆ ಅನುಮೋದನೆ ಸರಕಾರ ಬದ್ಧವಾಗಿದೆ. ಸಂಶೋಧನೆಗೆ ಹಣ ನೀಡಲು ಬದ್ಧವಾಗಿದೆ. ಇದರಲ್ಲಿ 817 ಲಕ್ಷ ಲ್ಯಾಬ್ ಹಾಗೂ ಸಂಶೋಧನೆಗೂ ನೀಡಲಾಗುವುದು ಎಂದರು. ಹಳದಿ ಎಲೆ ರೋಗದ ಬಗ್ಗೆ ಸದನದಲ್ಲಿ ಸುಮಾರು 10 ನಿಮಿಷಗಳ ಚರ್ಚೆ ನಡೆಯಿತು.
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…