MIRROR FOCUS

ಅಡಿಕೆ ಮಾರುಕಟ್ಟೆ | ಮತ್ತೆ ಅಡಿಕೆ ಆಮದು ಪತ್ತೆಯಾಯ್ತು | 2.74 ಕೋಟಿ ರೂ. ಮೌಲ್ಯದ ಅಡಿಕೆ ವಶ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಅಡಿಕೆಗೆ ಬೇಡಿಕೆ ಈಗಲೂ ಇದೆ. ಆದರೆ ಅಡಿಕೆ ಆಮದು ಪ್ರಯತ್ನ ನಡೆಯುತ್ತಲೇ ಇದೆ. ಇದಕ್ಕೆ ಬ್ರೇಕ್‌ ಬೀಳುತ್ತಿದೆ. ಇದೀಗ ಮತ್ತೆ ಅಸ್ಸಾಂ ಮೂಲಕ ದಾಖಲೆ ರಹಿತವಾಗಿ ಬಂದ 72  ಮೆಟ್ರಿಕ್‌ ಟನ್‌ ಅಡಿಕೆಯನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ. ಇದರ ಮೌಲ್ಯ ಸುಮಾರು 2.74 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.
Advertisement

ಮ್ಯಾನ್ಮಾರ್‌ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ  3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ  ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಮಿಜೋರಾಂನಿಂದ  ಅಡಿಕೆಯನ್ನು  ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.

ಅಡಿಕೆಗೆ ಬೇಡಿಕೆ ಇದೆ
ಇದುವರೆಗೆ ಅಡಿಕೆ ಅಕ್ರಮವಾಗಿ ಸಾಗಾಟದ ಅನೇಕ ಪ್ರಕರಣಗಳು ದಾಖಲಾಗಿದೆ. ಸೂಕ್ತ ಕ್ರಮಗಳಿಂದಾಗಿ ಅಡಿಕೆ ಧಾರಣೆ ಇಳಿಕೆಯಾಗದಂತೆ  ಅಡಿಕೆ ಬೆಳೆಗಾರರಿಗೆ ತೀರಾ ಪ್ರಯೋಜನವಾಗಿದೆ. ಅಡಿಕೆಗೆ ಈಗಲೂ ಉತ್ತರ ಭಾರತದಲ್ಲಿ  ಬೇಡಿಕೆ ವ್ಯಕ್ತವಾಗುತ್ತಿದೆ. ಆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ವಿರುದ್ಧ ಅಪಪ್ರಚಾರವೂ ಸಾಕಷ್ಟು ನಡೆಯುತ್ತಿದೆ ಎಂದು ಅಡಿಕೆ ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಸದ್ಯಕ್ಕೆ ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 18.04.2025 | ಕೆಲವು ಸೀಮಿತ ಪ್ರದೇಶದಲ್ಲಿ ಮಳೆ | ಎ.21ರಿಂದ ಮಳೆ ಹೆಚ್ಚಾಗುವ ಸಾಧ್ಯತೆ

19.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

4 hours ago

ಈ ದೇಶದ ಬದಲಾವಣೆ ಎಲ್ಲಿಂದ ಆರಂಭ..?

ಯಾವುದೇ ಬದಲಾವಣೆ ಆಗಬೇಕಾದರೆ ವ್ಯಕ್ತಿಯ ಒಳಗೆ ಬದಲಾವಣೆ ಆರಂಭವಾಗಬೇಕು. ಮನಸ್ಸಿನಲ್ಲಿ ಪಾಸಿಟಿವ್ ಬದಲಾವಣೆಯ…

9 hours ago

ಸದ್ಯ ಮುಂಗಾರು ಮಳೆ ಆಶಾವಾದ | ಮುಂದಿರುವ ಸವಾಲುಗಳಲ್ಲಿ ತಾಪಮಾನವೇ ಪ್ರಮುಖ |

ಈ ಬಾರಿ ಮುಂಗಾರು ಮಳೆಯಲ್ಲಿ ಸರಾಸರಿ  105% ರಷ್ಟು ಮಳೆಯಾಗುವ ಸಾಧ್ಯತೆ ಇದೆ.…

13 hours ago

ಯಾಣವನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಪಣ | ಅರಣ್ಯ ಇಲಾಖೆಯಿಂದ ಹಲವು ಕ್ರಮ

ಪ್ರವಾಸಿ ತಾಣಗಳಲ್ಲಿ  ಸ್ವಚ್ಛತೆ ಕಾಪಾಡುವುದು  ಸ್ಥಳೀಯ  ಆಡಳಿತಕ್ಕೆ  ಎಷ್ಟು ಮುಖ್ಯವೋ ಅಲ್ಲಿಗೆ ಭೇಟಿ…

13 hours ago

ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ರೈಲು | ಎಲ್ ಹೆಚ್ ಬಿ ಬೋಗಿ ಅಳವಡಿಸಲು ನೈರುತ್ಯ ರೈಲ್ವೆ  ಸಜ್ಜು

ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ…

13 hours ago

ಜಾನುವಾರು ಕಾಲುಬಾಯಿರೋಗ | ಎ.21 ರಿಂದ ಜೂ.4 ಲಸಿಕಾ ಅಭಿಯಾನ

ಜಾನುವಾರುಗಳ ಕಾಲುಬಾಯಿ ರೋಗ ನಿಯಂತ್ರಣಕ್ಕಾಗಿ 7 ನೇ ಸುತ್ತಿನ ಲಸಿಕಾ ಅಭಿಯಾನವನ್ನು ರಾಜ್ಯಾದ್ಯಂತ…

13 hours ago