Advertisement
MIRROR FOCUS

ಅಡಿಕೆ ಮಾರುಕಟ್ಟೆ | ಮತ್ತೆ ಅಡಿಕೆ ಆಮದು ಪತ್ತೆಯಾಯ್ತು | 2.74 ಕೋಟಿ ರೂ. ಮೌಲ್ಯದ ಅಡಿಕೆ ವಶ

Share
ಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಅಡಿಕೆಗೆ ಬೇಡಿಕೆ ಈಗಲೂ ಇದೆ. ಆದರೆ ಅಡಿಕೆ ಆಮದು ಪ್ರಯತ್ನ ನಡೆಯುತ್ತಲೇ ಇದೆ. ಇದಕ್ಕೆ ಬ್ರೇಕ್‌ ಬೀಳುತ್ತಿದೆ. ಇದೀಗ ಮತ್ತೆ ಅಸ್ಸಾಂ ಮೂಲಕ ದಾಖಲೆ ರಹಿತವಾಗಿ ಬಂದ 72  ಮೆಟ್ರಿಕ್‌ ಟನ್‌ ಅಡಿಕೆಯನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ. ಇದರ ಮೌಲ್ಯ ಸುಮಾರು 2.74 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

ಮ್ಯಾನ್ಮಾರ್‌ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ  3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ  ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

Advertisement

ಮಿಜೋರಾಂನಿಂದ  ಅಡಿಕೆಯನ್ನು  ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.

ಅಡಿಕೆಗೆ ಬೇಡಿಕೆ ಇದೆ
ಇದುವರೆಗೆ ಅಡಿಕೆ ಅಕ್ರಮವಾಗಿ ಸಾಗಾಟದ ಅನೇಕ ಪ್ರಕರಣಗಳು ದಾಖಲಾಗಿದೆ. ಸೂಕ್ತ ಕ್ರಮಗಳಿಂದಾಗಿ ಅಡಿಕೆ ಧಾರಣೆ ಇಳಿಕೆಯಾಗದಂತೆ  ಅಡಿಕೆ ಬೆಳೆಗಾರರಿಗೆ ತೀರಾ ಪ್ರಯೋಜನವಾಗಿದೆ. ಅಡಿಕೆಗೆ ಈಗಲೂ ಉತ್ತರ ಭಾರತದಲ್ಲಿ  ಬೇಡಿಕೆ ವ್ಯಕ್ತವಾಗುತ್ತಿದೆ. ಆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ವಿರುದ್ಧ ಅಪಪ್ರಚಾರವೂ ಸಾಕಷ್ಟು ನಡೆಯುತ್ತಿದೆ ಎಂದು ಅಡಿಕೆ ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಸದ್ಯಕ್ಕೆ ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

15 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

17 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

24 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago