Advertisement
ಸುದ್ದಿಗಳು

ಮ್ಯಾನ್ಮಾರ್ ಅಡಿಕೆ ಆಮದು ಮಣಿಪುರ ಸರ್ಕಾರದ ಆದಾಯ ಹೆಚ್ಚಿಸಬಲ್ಲುದು…! | ಮಣಿಪುರ ಸಚಿವೆ ಹೇಳಿಕೆ |

Share

ಮಣಿಪುರದಲ್ಲಿ ಪ್ರಸ್ತುತ ಆರು ಕೈಗಾರಿಕಾ ವಲಯ ಹೊಂದಿದೆ ಮತ್ತು ಇನ್ನೂ ಎರಡು ಕೈಗಾರಿಕಾ ವಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.  ಅದರ ಜೊತೆಗೆ ಅಡಿಕೆ ವ್ಯವಹಾರ ಸಾಕಷ್ಟು ನಡೆಯುತ್ತಿದೆ. ಆದರೆ ಕಳ್ಳಸಾಗಾಣಿಕೆ ಮೂಲಕ ನಡೆಯುತ್ತದೆ. ಇದರ ಬದಲಾಗಿ ಅಡಿಕೆ ಆಮದಿಗೆ ಅವಕಾಶ ನೀಡಿದರೆ ಸರ್ಕಾರಕ್ಕೆ ಆದಾಯ ಹೆಚ್ಚಾಗುತ್ತದೆ ಎಂದು ಮಣಿಪುರದ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನೆಮ್ಚಾ ಕಿಪ್ಗೆನ್‌ ಹೇಳಿದ್ದಾರೆ.

ಮಣಿಪುರ ಸರ್ಕಾರದ ಅಧಿವೇಶನದಲ್ಲಿ  ಮಾಹಿತಿ ನೀಡಿದ ಸಚಿವೆ, ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಆಮದಾಗುತ್ತಿದೆ. ಭಾರತದಲ್ಲಿ ಅಡಿಕೆ ಬಳಕೆ ಹೆಚ್ಚಿದೆ. ಆದರೆ ರಾಜ್ಯದ ಯಾವುದೇ ಉದ್ಯಮ ಅಡಿಕೆಯಿಂದ ನಡೆಸಲು ಆಗುತ್ತಿಲ್ಲ. ಅಡಿಕೆ ಬಳಕೆ ಇಂದು ಬಟ್ಟೆ ಉದ್ಯಮದಲ್ಲೂ ಇರುವುದರಿಂದ ಹೆಚ್ಚಿನ ಬೇಡಿಕೆ ಇದೆ. ಇದಕ್ಕಾಗಿ ಅಡಿಕೆ ವ್ಯಾಪಾರಕ್ಕೆ ಅನುವು ಮಾಡಿಕೊಡಲು, ಅಡಿಕೆ ಆಮದಿಗೂ ಅವಕಾಶ ನೀಡಲು ರಾಜ್ಯ ಸರ್ಕಾರವು ಕೆಲವು ಉಪಕ್ರಮಗಳನ್ನು ಕೈಗೊಂಡರೆ ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸಬಹುದು ಎಂದು ಅವರು ಸದನಕ್ಕೆ ಹೇಳಿದರು.

ಮ್ಯಾನ್ಮಾರ್‌ ಅಡಿಕೆಯು ಕಳ್ಳದಾರಿಯ ಮೂಲಕ  ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್‌, ಮೇಘಾಲಯ, ಅಸ್ಸಾಂ ರಾಜ್ಯಗಳಲ್ಲಿ ಹಾದು ಭಾರತದೊಳಕ್ಕೆ ಪ್ರವೇಶ ಮಾಡುತ್ತಿದೆ. ಇದರಿಂದ ದೇಶದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತದೆ. ಹಾಗಿದ್ದೂ ಅಧಿಕೃತವಾಗಿ ಅಡಿಕೆ ಆಮದಿಗೆ ಅನುಮತಿ ದೊರೆತರೆ ಭಾರತದ ಅಡಿಕೆಯ ಮೇಲೆ ಸ್ವಲ್ಪ ಪ್ರಮಾಣದಲ್ಲಿ ಪರಿಣಾಮ ಬೀರಬಹುದು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ವಿಶ್ಲೇಷಣೆ

ಸಮಾಜದ ಚರ್ಚೆಯ ಪ್ರತಿಬಿಂಬ

Published by
ಮಿರರ್‌ ವಿಶ್ಲೇಷಣೆ

Recent Posts

ಮಳೆ ಕೊರತೆ ತೀವ್ರ – ಬೆಂಗಳೂರು ಗ್ರಾಮಾಂತರದಲ್ಲಿ ಕೇವಲ ಶೇ. 3 ಬಿತ್ತನೆ; ನೀರಿನ ಬಳಕೆಗೆ ಕಟ್ಟುನಿಟ್ಟಿನ ಕ್ರಮ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…

27 minutes ago

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

21 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

21 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

1 day ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

1 day ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

1 day ago