ಮಣಿಪುರದಲ್ಲಿ ಪ್ರಸ್ತುತ ಆರು ಕೈಗಾರಿಕಾ ವಲಯ ಹೊಂದಿದೆ ಮತ್ತು ಇನ್ನೂ ಎರಡು ಕೈಗಾರಿಕಾ ವಲಯ ಸ್ಥಾಪಿಸಲು ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಅದರ ಜೊತೆಗೆ ಅಡಿಕೆ ವ್ಯವಹಾರ ಸಾಕಷ್ಟು ನಡೆಯುತ್ತಿದೆ. ಆದರೆ ಕಳ್ಳಸಾಗಾಣಿಕೆ ಮೂಲಕ ನಡೆಯುತ್ತದೆ. ಇದರ ಬದಲಾಗಿ ಅಡಿಕೆ ಆಮದಿಗೆ ಅವಕಾಶ ನೀಡಿದರೆ ಸರ್ಕಾರಕ್ಕೆ ಆದಾಯ ಹೆಚ್ಚಾಗುತ್ತದೆ ಎಂದು ಮಣಿಪುರದ ಕೈಗಾರಿಕಾ ಮತ್ತು ವಾಣಿಜ್ಯ ಸಚಿವೆ ನೆಮ್ಚಾ ಕಿಪ್ಗೆನ್ ಹೇಳಿದ್ದಾರೆ.
ಮಣಿಪುರ ಸರ್ಕಾರದ ಅಧಿವೇಶನದಲ್ಲಿ ಮಾಹಿತಿ ನೀಡಿದ ಸಚಿವೆ, ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಆಮದಾಗುತ್ತಿದೆ. ಭಾರತದಲ್ಲಿ ಅಡಿಕೆ ಬಳಕೆ ಹೆಚ್ಚಿದೆ. ಆದರೆ ರಾಜ್ಯದ ಯಾವುದೇ ಉದ್ಯಮ ಅಡಿಕೆಯಿಂದ ನಡೆಸಲು ಆಗುತ್ತಿಲ್ಲ. ಅಡಿಕೆ ಬಳಕೆ ಇಂದು ಬಟ್ಟೆ ಉದ್ಯಮದಲ್ಲೂ ಇರುವುದರಿಂದ ಹೆಚ್ಚಿನ ಬೇಡಿಕೆ ಇದೆ. ಇದಕ್ಕಾಗಿ ಅಡಿಕೆ ವ್ಯಾಪಾರಕ್ಕೆ ಅನುವು ಮಾಡಿಕೊಡಲು, ಅಡಿಕೆ ಆಮದಿಗೂ ಅವಕಾಶ ನೀಡಲು ರಾಜ್ಯ ಸರ್ಕಾರವು ಕೆಲವು ಉಪಕ್ರಮಗಳನ್ನು ಕೈಗೊಂಡರೆ ರಾಜ್ಯದ ಆರ್ಥಿಕತೆಯನ್ನು ಹೆಚ್ಚಿಸಬಹುದು ಎಂದು ಅವರು ಸದನಕ್ಕೆ ಹೇಳಿದರು.
ಮ್ಯಾನ್ಮಾರ್ ಅಡಿಕೆಯು ಕಳ್ಳದಾರಿಯ ಮೂಲಕ ತ್ರಿಪುರಾ, ಮಣಿಪುರ, ನಾಗಾಲ್ಯಾಂಡ್, ಮೇಘಾಲಯ, ಅಸ್ಸಾಂ ರಾಜ್ಯಗಳಲ್ಲಿ ಹಾದು ಭಾರತದೊಳಕ್ಕೆ ಪ್ರವೇಶ ಮಾಡುತ್ತಿದೆ. ಇದರಿಂದ ದೇಶದ ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತದೆ. ಹಾಗಿದ್ದೂ ಅಧಿಕೃತವಾಗಿ ಅಡಿಕೆ ಆಮದಿಗೆ ಅನುಮತಿ ದೊರೆತರೆ ಭಾರತದ ಅಡಿಕೆಯ ಮೇಲೆ ಸ್ವಲ್ಪ ಪ್ರಮಾಣದಲ್ಲಿ ಪರಿಣಾಮ ಬೀರಬಹುದು.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…