#Arecanut | ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿರುವ ಬರ್ಮಾ ಅಡಿಕೆ | ಕಳ್ಳ ಸಾಗಾಣಿಕೆ ತಡೆಯಲು ಬಿಗುವಿನ ಕ್ರಮ |

September 4, 2023
10:43 PM
ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ ಸೆ.3 ರಂದು  ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು  89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.

ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುವುದು ಇನ್ನೂ ಕಡಿಮೆಯಾಗಿಲ್ಲ. ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಭಾರತದೊಳಕ್ಕೆ ಬಂದಿರುವ ಬರ್ಮಾ ಅಡಿಕೆಯು ಇಲ್ಲಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಮತ್ತೆ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಸಾಗಾಟ ಮಾಡಲಾಗುತ್ತಿದೆ. ಸೆ.3 ರಂದು ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ  ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು  89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.

ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಅಡಿಕೆ ಸಾಗಾಟ ಪತ್ತೆ ಮಾಡಲಾಗಿದೆ. 89.6 ಲಕ್ಷ ಮೌಲ್ಯದ 160 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ ಎಂದು ಅಸ್ಸಾಂ ರೈಫಲ್ಸ್ ಹೇಳಿಕೆ ತಿಳಿಸಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಬರ್ಮಾ ಅಡಿಕೆಯು ವಿವಿಧ ದಾರಿಯ ಮೂಲಕ ಭಾರತದೊಳಕ್ಕೆ ಬಂದು, ಕರ್ನಾಟಕದ ವಿವಿಧ ಕಡೆಗಳಿಗೂ ಬಂದಿಳಿದಿದೆ ಎಂದು ಮಾರುಕಟ್ಟೆ ವಲಯದಲ್ಲಿ ಚರ್ಚೆಯಾಗುತ್ತಿದೆ. ಹೀಗಾಗಿ ಈಗ ಏರಿಕೆ ಕಾಣಬೇಕಾದ ಅಡಿಕೆ ಮಾರುಕಟ್ಟೆಯು ಕಳೆಗುಂದಿದೆ.

ಗಣೇಶ ಚೌತಿಯ ಸಮಯದಲ್ಲಿ ಅಡಿಕೆಗೆ ಹೆಚ್ಚಿನ ಬೇಡಿಕೆ ಬರುವುದು ಸಾಮಾನ್ಯವಾಗಿದೆ. ಗಣೇಶ ಚೌತಿಯ ಬೇಡಿಕೆ ಪೂರೈಕೆಗೆ ಈಗಲೇ ಅಡಿಕೆ ದಾಸ್ತಾನು ಪ್ರಕ್ರಿಯೆ ನಡೆಯುತ್ತದೆ. ಆದರೆ ಈ ಬಾರಿ ಅಂತಹ ಬೇಡಿಕೆ ಆರಂಭಗೊಂಡಿಲ್ಲ.  ಕಳೆದ ಕೆಲವು ದಿನಗಳಿಂದ ಹಾಗೂ ಈಗಲೂ ವಿವಿಧ ಮಾರ್ಗಗಳಿಂದ ಬರ್ಮಾ ಅಡಿಕೆಯನ್ನು ಸಂಗ್ರಹಿಸಿ ಗಣೇಶ ಚೌತಿಯ ಬೇಡಿಕೆಯನ್ನು ಪೂರೈಸಲು ಬಳಕೆ ಮಾಡಲಾಗುತ್ತಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಆದರೆ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇರಬಹುದು, ನಿರೀಕ್ಷೆಯಂತೆ ಏರಿಕೆಯಾಗದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕಡಿಮೆ ಗುಣಮಟ್ಟದ ಬರ್ಮಾ ಅಡಿಕೆಯನ್ನು ಇಲ್ಲಿನ ಅಡಿಕೆಯೊಂದಿಗೆ ಬೆರೆಸಿ ಮಾರಾಟ ಮಾಡುವ ಪ್ರಯತ್ನವೂ ಕೆಲವು ಕಡೆ ನಡೆಯುತ್ತಿದೆ. ಹೀಗಾಗಿ ಈಗ ಅಡಿಕೆ ಬೆಳೆಗಾರರಿಗೆ ಬರ್ಮಾ ಅಡಿಕೆ ಬಹುದೊಡ್ಡ ತಲೆನೋವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ
July 23, 2026
7:29 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ
July 22, 2026
3:55 PM
by: ಸಾಯಿಶೇಖರ್ ಕರಿಕಳ
ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ
July 21, 2026
11:55 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ
July 21, 2026
4:32 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror