ಸುದ್ದಿಗಳು

#Arecanut | ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿರುವ ಬರ್ಮಾ ಅಡಿಕೆ | ಕಳ್ಳ ಸಾಗಾಣಿಕೆ ತಡೆಯಲು ಬಿಗುವಿನ ಕ್ರಮ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುವುದು ಇನ್ನೂ ಕಡಿಮೆಯಾಗಿಲ್ಲ. ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಭಾರತದೊಳಕ್ಕೆ ಬಂದಿರುವ ಬರ್ಮಾ ಅಡಿಕೆಯು ಇಲ್ಲಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಮತ್ತೆ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಸಾಗಾಟ ಮಾಡಲಾಗುತ್ತಿದೆ. ಸೆ.3 ರಂದು ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ  ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು  89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.

Advertisement

ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಅಡಿಕೆ ಸಾಗಾಟ ಪತ್ತೆ ಮಾಡಲಾಗಿದೆ. 89.6 ಲಕ್ಷ ಮೌಲ್ಯದ 160 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ ಎಂದು ಅಸ್ಸಾಂ ರೈಫಲ್ಸ್ ಹೇಳಿಕೆ ತಿಳಿಸಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಬರ್ಮಾ ಅಡಿಕೆಯು ವಿವಿಧ ದಾರಿಯ ಮೂಲಕ ಭಾರತದೊಳಕ್ಕೆ ಬಂದು, ಕರ್ನಾಟಕದ ವಿವಿಧ ಕಡೆಗಳಿಗೂ ಬಂದಿಳಿದಿದೆ ಎಂದು ಮಾರುಕಟ್ಟೆ ವಲಯದಲ್ಲಿ ಚರ್ಚೆಯಾಗುತ್ತಿದೆ. ಹೀಗಾಗಿ ಈಗ ಏರಿಕೆ ಕಾಣಬೇಕಾದ ಅಡಿಕೆ ಮಾರುಕಟ್ಟೆಯು ಕಳೆಗುಂದಿದೆ.

ಗಣೇಶ ಚೌತಿಯ ಸಮಯದಲ್ಲಿ ಅಡಿಕೆಗೆ ಹೆಚ್ಚಿನ ಬೇಡಿಕೆ ಬರುವುದು ಸಾಮಾನ್ಯವಾಗಿದೆ. ಗಣೇಶ ಚೌತಿಯ ಬೇಡಿಕೆ ಪೂರೈಕೆಗೆ ಈಗಲೇ ಅಡಿಕೆ ದಾಸ್ತಾನು ಪ್ರಕ್ರಿಯೆ ನಡೆಯುತ್ತದೆ. ಆದರೆ ಈ ಬಾರಿ ಅಂತಹ ಬೇಡಿಕೆ ಆರಂಭಗೊಂಡಿಲ್ಲ.  ಕಳೆದ ಕೆಲವು ದಿನಗಳಿಂದ ಹಾಗೂ ಈಗಲೂ ವಿವಿಧ ಮಾರ್ಗಗಳಿಂದ ಬರ್ಮಾ ಅಡಿಕೆಯನ್ನು ಸಂಗ್ರಹಿಸಿ ಗಣೇಶ ಚೌತಿಯ ಬೇಡಿಕೆಯನ್ನು ಪೂರೈಸಲು ಬಳಕೆ ಮಾಡಲಾಗುತ್ತಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಆದರೆ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇರಬಹುದು, ನಿರೀಕ್ಷೆಯಂತೆ ಏರಿಕೆಯಾಗದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕಡಿಮೆ ಗುಣಮಟ್ಟದ ಬರ್ಮಾ ಅಡಿಕೆಯನ್ನು ಇಲ್ಲಿನ ಅಡಿಕೆಯೊಂದಿಗೆ ಬೆರೆಸಿ ಮಾರಾಟ ಮಾಡುವ ಪ್ರಯತ್ನವೂ ಕೆಲವು ಕಡೆ ನಡೆಯುತ್ತಿದೆ. ಹೀಗಾಗಿ ಈಗ ಅಡಿಕೆ ಬೆಳೆಗಾರರಿಗೆ ಬರ್ಮಾ ಅಡಿಕೆ ಬಹುದೊಡ್ಡ ತಲೆನೋವಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಂಡ್ಯದಲ್ಲಿ  ಸ್ವಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆ ಅವಕಾಶ

ಸಹಾಯ ಸಂಘದ ಮಹಿಳೆಯರಿಗೆ ಮೇಕೆ, ಕುರಿ, ಕೋಳಿ ಸಾಕಾಣಿಕೆಯಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅವಕಾಶವಿದೆ…

2 minutes ago

ಇಂಧನ ಆಮದು ದೇಶಗಳ ಗುಂಪು ವಿಸ್ತರಿಸಿದ ಭಾರತ – 2 ಲಕ್ಷ ಚ.ಕಿ.ಮೀ. ಪ್ರದೇಶದಲ್ಲಿ ಹೈಡ್ರೋಕಾರ್ಬನ್ ಪರಿಶೋಧನೆ

ವಿಶ್ವದ ಹಲವು ಭಾಗಗಳಲ್ಲಿನ ಭೌಗೋಳಿಕ ರಾಜಕೀಯ ಪರಿಸ್ಥಿತಿಗಳ ಹೊರತಾಗಿಯೂ ಭಾರತವು ಇಂಧನ ಲಭ್ಯತೆ,…

12 minutes ago

ಮುಳ್ಳಯ್ಯನಗಿರಿಗೆ 600 ವಾಹನಗಳಿಗೆ ಪ್ರವೇಶ | ವಾಹನಗಳ ದಟ್ಟಣೆ ನಿಯಂತ್ರಿಸಲು ಕ್ರಮ

ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ ಭಾಗದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತ ವಾಹನಗಳಿಗೆ ಎರಡು…

17 minutes ago

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗ ಭಾದೆ

ಯಾದಗಿರಿಯಲ್ಲಿ ಹೆಸರು ಬೆಳೆಗೆ ಹಳದಿ ನಂಜಾಣು ರೋಗದ ಭಾದೆ ಕಾಣಿಸಿಕೊಂಡಿದ್ದು, ಇದರ ತಡೆಗೆ…

1 hour ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಧಾರಾಕಾರ ಮಳೆ | ಮಳೆಗೆ ಎಲ್ಲೆಲ್ಲಿ ಏನೇನಾಯ್ತು…? |

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಿದೆ. ದಕ್ಷಿಣಕನ್ನಡ ಜಿಲ್ಲೆಯ ಮುಲ್ಕಿಯಲ್ಲಿ 30…

1 hour ago

ಹವಾಮಾನ ವರದಿ | 17-07-2025 | ಸಾಮಾನ್ಯ ಮಳೆ ಮುಂದುವರಿಕೆ ಎಷ್ಟು ದಿನ..? | ಜು.25 ರವರೆಗೂ ರಾಜ್ಯದಲ್ಲಿ ಹೇಗಿದೆ ಮಳೆ..?

ಈಗಿನಂತೆ ಜುಲೈ 25ರ ತನಕವೂ ರಾಜ್ಯದಾದ್ಯಂತ ಅಲ್ಲಲ್ಲಿ ಮಳೆ ಮುಂದುವರಿಯುವ ಲಕ್ಷಣಗಳಿವೆ.

1 hour ago