Advertisement
ಸುದ್ದಿಗಳು

#Arecanut | ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿರುವ ಬರ್ಮಾ ಅಡಿಕೆ | ಕಳ್ಳ ಸಾಗಾಣಿಕೆ ತಡೆಯಲು ಬಿಗುವಿನ ಕ್ರಮ |

Share

ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುವುದು ಇನ್ನೂ ಕಡಿಮೆಯಾಗಿಲ್ಲ. ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಭಾರತದೊಳಕ್ಕೆ ಬಂದಿರುವ ಬರ್ಮಾ ಅಡಿಕೆಯು ಇಲ್ಲಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಮತ್ತೆ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಸಾಗಾಟ ಮಾಡಲಾಗುತ್ತಿದೆ. ಸೆ.3 ರಂದು ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ  ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು  89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.

Advertisement
Advertisement

ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಅಡಿಕೆ ಸಾಗಾಟ ಪತ್ತೆ ಮಾಡಲಾಗಿದೆ. 89.6 ಲಕ್ಷ ಮೌಲ್ಯದ 160 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ ಎಂದು ಅಸ್ಸಾಂ ರೈಫಲ್ಸ್ ಹೇಳಿಕೆ ತಿಳಿಸಿದೆ.

Advertisement

ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಬರ್ಮಾ ಅಡಿಕೆಯು ವಿವಿಧ ದಾರಿಯ ಮೂಲಕ ಭಾರತದೊಳಕ್ಕೆ ಬಂದು, ಕರ್ನಾಟಕದ ವಿವಿಧ ಕಡೆಗಳಿಗೂ ಬಂದಿಳಿದಿದೆ ಎಂದು ಮಾರುಕಟ್ಟೆ ವಲಯದಲ್ಲಿ ಚರ್ಚೆಯಾಗುತ್ತಿದೆ. ಹೀಗಾಗಿ ಈಗ ಏರಿಕೆ ಕಾಣಬೇಕಾದ ಅಡಿಕೆ ಮಾರುಕಟ್ಟೆಯು ಕಳೆಗುಂದಿದೆ.

ಗಣೇಶ ಚೌತಿಯ ಸಮಯದಲ್ಲಿ ಅಡಿಕೆಗೆ ಹೆಚ್ಚಿನ ಬೇಡಿಕೆ ಬರುವುದು ಸಾಮಾನ್ಯವಾಗಿದೆ. ಗಣೇಶ ಚೌತಿಯ ಬೇಡಿಕೆ ಪೂರೈಕೆಗೆ ಈಗಲೇ ಅಡಿಕೆ ದಾಸ್ತಾನು ಪ್ರಕ್ರಿಯೆ ನಡೆಯುತ್ತದೆ. ಆದರೆ ಈ ಬಾರಿ ಅಂತಹ ಬೇಡಿಕೆ ಆರಂಭಗೊಂಡಿಲ್ಲ.  ಕಳೆದ ಕೆಲವು ದಿನಗಳಿಂದ ಹಾಗೂ ಈಗಲೂ ವಿವಿಧ ಮಾರ್ಗಗಳಿಂದ ಬರ್ಮಾ ಅಡಿಕೆಯನ್ನು ಸಂಗ್ರಹಿಸಿ ಗಣೇಶ ಚೌತಿಯ ಬೇಡಿಕೆಯನ್ನು ಪೂರೈಸಲು ಬಳಕೆ ಮಾಡಲಾಗುತ್ತಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಆದರೆ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇರಬಹುದು, ನಿರೀಕ್ಷೆಯಂತೆ ಏರಿಕೆಯಾಗದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕಡಿಮೆ ಗುಣಮಟ್ಟದ ಬರ್ಮಾ ಅಡಿಕೆಯನ್ನು ಇಲ್ಲಿನ ಅಡಿಕೆಯೊಂದಿಗೆ ಬೆರೆಸಿ ಮಾರಾಟ ಮಾಡುವ ಪ್ರಯತ್ನವೂ ಕೆಲವು ಕಡೆ ನಡೆಯುತ್ತಿದೆ. ಹೀಗಾಗಿ ಈಗ ಅಡಿಕೆ ಬೆಳೆಗಾರರಿಗೆ ಬರ್ಮಾ ಅಡಿಕೆ ಬಹುದೊಡ್ಡ ತಲೆನೋವಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

14 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

15 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago