Advertisement
ಸುದ್ದಿಗಳು

#Arecanut | ಅಡಿಕೆ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿರುವ ಬರ್ಮಾ ಅಡಿಕೆ | ಕಳ್ಳ ಸಾಗಾಣಿಕೆ ತಡೆಯಲು ಬಿಗುವಿನ ಕ್ರಮ |

Share

ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತಕ್ಕೆ ಬರುವುದು ಇನ್ನೂ ಕಡಿಮೆಯಾಗಿಲ್ಲ. ಕಳೆದ ಎರಡು ತಿಂಗಳಿನಿಂದ ಅಕ್ರಮವಾಗಿ ಭಾರತದೊಳಕ್ಕೆ ಬಂದಿರುವ ಬರ್ಮಾ ಅಡಿಕೆಯು ಇಲ್ಲಿನ ಮಾರುಕಟ್ಟೆ ಮೇಲೆ ಪರಿಣಾಮ ಬೀರುತ್ತಿದೆ. ಈ ನಡುವೆ ಮತ್ತೆ ಬರ್ಮಾ ಅಡಿಕೆ ಕಳ್ಳದಾರಿಯ ಮೂಲಕ ಸಾಗಾಟ ಮಾಡಲಾಗುತ್ತಿದೆ. ಸೆ.3 ರಂದು ಮಿಜೋರಾಂನ ಭದ್ರತಾ ಪಡೆಗಳು ಚಂಫೈ ಜಿಲ್ಲೆಯಲ್ಲಿ  ಅಡಿಕೆ ಸಾಗಾಟವನ್ನು ಅಸ್ಸಾಂ ರೈಫಲ್ಸ್ ವಶಪಡಿಸಿಕೊಂಡಿದೆ. ಸುಮಾರು  89.6 ಲಕ್ಷ ಮೌಲ್ಯದ ಅಡಿಕೆ ವಶ ಪಡೆದಿದ್ದಾರೆ.

ಮಿಜೋರಾಂನಲ್ಲಿ ಅಸ್ಸಾಂ ರೈಫಲ್ಸ್ ಮತ್ತು ತೆರಿಗೆ ಇಲಾಖೆ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ಅಡಿಕೆ ಸಾಗಾಟ ಪತ್ತೆ ಮಾಡಲಾಗಿದೆ. 89.6 ಲಕ್ಷ ಮೌಲ್ಯದ 160 ಚೀಲ ಅಡಿಕೆಗಳನ್ನು ವಶಪಡಿಸಿಕೊಂಡಿದೆ ಎಂದು ಅಸ್ಸಾಂ ರೈಫಲ್ಸ್ ಹೇಳಿಕೆ ತಿಳಿಸಿದೆ.

ಕಳೆದ ಕೆಲವು ಸಮಯಗಳಿಂದ ಅಡಿಕೆ ಕಳ್ಳಸಾಗಾಣಿಕೆ ಮೂಲಕ ಭಾರತದೊಳಕ್ಕೆ ಬರುತ್ತಿದೆ. ಬರ್ಮಾ ಅಡಿಕೆಯು ವಿವಿಧ ದಾರಿಯ ಮೂಲಕ ಭಾರತದೊಳಕ್ಕೆ ಬಂದು, ಕರ್ನಾಟಕದ ವಿವಿಧ ಕಡೆಗಳಿಗೂ ಬಂದಿಳಿದಿದೆ ಎಂದು ಮಾರುಕಟ್ಟೆ ವಲಯದಲ್ಲಿ ಚರ್ಚೆಯಾಗುತ್ತಿದೆ. ಹೀಗಾಗಿ ಈಗ ಏರಿಕೆ ಕಾಣಬೇಕಾದ ಅಡಿಕೆ ಮಾರುಕಟ್ಟೆಯು ಕಳೆಗುಂದಿದೆ.

ಗಣೇಶ ಚೌತಿಯ ಸಮಯದಲ್ಲಿ ಅಡಿಕೆಗೆ ಹೆಚ್ಚಿನ ಬೇಡಿಕೆ ಬರುವುದು ಸಾಮಾನ್ಯವಾಗಿದೆ. ಗಣೇಶ ಚೌತಿಯ ಬೇಡಿಕೆ ಪೂರೈಕೆಗೆ ಈಗಲೇ ಅಡಿಕೆ ದಾಸ್ತಾನು ಪ್ರಕ್ರಿಯೆ ನಡೆಯುತ್ತದೆ. ಆದರೆ ಈ ಬಾರಿ ಅಂತಹ ಬೇಡಿಕೆ ಆರಂಭಗೊಂಡಿಲ್ಲ.  ಕಳೆದ ಕೆಲವು ದಿನಗಳಿಂದ ಹಾಗೂ ಈಗಲೂ ವಿವಿಧ ಮಾರ್ಗಗಳಿಂದ ಬರ್ಮಾ ಅಡಿಕೆಯನ್ನು ಸಂಗ್ರಹಿಸಿ ಗಣೇಶ ಚೌತಿಯ ಬೇಡಿಕೆಯನ್ನು ಪೂರೈಸಲು ಬಳಕೆ ಮಾಡಲಾಗುತ್ತಿದೆ ಎನ್ನುವುದು ಮಾರುಕಟ್ಟೆ ವಲಯದ ಅಭಿಪ್ರಾಯ. ಆದರೆ ಅಡಿಕೆ ಧಾರಣೆ ಸ್ಥಿರತೆಯಲ್ಲಿ ಇರಬಹುದು, ನಿರೀಕ್ಷೆಯಂತೆ ಏರಿಕೆಯಾಗದು ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಕಡಿಮೆ ಗುಣಮಟ್ಟದ ಬರ್ಮಾ ಅಡಿಕೆಯನ್ನು ಇಲ್ಲಿನ ಅಡಿಕೆಯೊಂದಿಗೆ ಬೆರೆಸಿ ಮಾರಾಟ ಮಾಡುವ ಪ್ರಯತ್ನವೂ ಕೆಲವು ಕಡೆ ನಡೆಯುತ್ತಿದೆ. ಹೀಗಾಗಿ ಈಗ ಅಡಿಕೆ ಬೆಳೆಗಾರರಿಗೆ ಬರ್ಮಾ ಅಡಿಕೆ ಬಹುದೊಡ್ಡ ತಲೆನೋವಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

6 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

6 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

6 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

7 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

19 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago