ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಕಳೆದ ಸೋಮವಾರದ ನಂತರ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬಂದಿದೆ. ಆದರೆ ಹೊಸ ಅಡಿಕೆಗೆ ಮಾತ್ರಾ ಸದ್ಯ ಬೇಡಿಕೆಯ ಲಕ್ಷಣಗಳು ಇವೆ. ಚಾಲಿ ಅಡಿಕೆಯಲ್ಲಿ ಹಳೆ ಅಡಿಕೆ ಹಾಗೂ ಹೊಸ ಅಡಿಕೆಯ ನಡುವೆ ಹೆಚ್ಚಿನ ವ್ಯತ್ಯಾಸ ಇದ್ದು, ಈ ಅಂತರ ಕಡಿಮೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ತಡೆಯಾಗಿದ್ದು 1.06 ಕೋಟಿ ಮೌಲ್ಯದ ಅಡಿಕೆಯಲ್ಲಿ ಅಸ್ಸಾಂ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ವಶಕ್ಕೆ ಪಡೆದಿದ್ದಾರೆ.
ಕಳ್ಳ ದಾರಿಯ ಮೂಲಕ ಸುಮಾರು 1012 ಚೀಲ ಅಡಿಕೆಯನ್ನು ಭಾರತದೊಳಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು. ಈ ಸಂದರ್ಭ ಅಸ್ಸಾಂ ರೈಪಲ್ಸ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ತನಿಖೆಯನ್ನು ಮುಂದುವರಿಸಿದ್ದಾರೆ.
ಭಾರತದಲ್ಲಿ ಅಡಿಕೆಯ ಕೊರತೆ ಇದ್ದರೂ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಳ್ಳಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಯ ಕೊರತೆ ಹಾಗೂ ಅಡಿಕೆ ದಾಸ್ತಾನಿನಲ್ಲೂ ವ್ಯತ್ಯಾಸ ಇರುವುದರಿಂದ ಧಾರಣೆಯಲ್ಲಿ ಇಳಿಕೆಯಾಗಿಲ್ಲ. ಇದೀಗ ಅಡಿಕೆ ದಾಸ್ತಾನು ಕಡೆಗೆ ಅಡಿಕೆ ವ್ಯಾಪಾರಿಗಳು ಮನಸ್ಸು ಮಾಡಿದ್ದು, ಈಗ ಹೊಸ ಅಡಿಕೆ ದಾಸ್ತಾನು ಮಾಡಲುವ ಮೂಲಕ ಮುಂದಿನ ಎರಡು ತಿಂಗಳಲ್ಲಿ ಹಳೆ ಅಡಿಕೆ ಧಾರಣೆಗೆ ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ ಎನ್ನುವುದು ಮಾರುಕಟ್ಟೆ ಮಾಹಿತಿ. ಸದ್ಯ ಹೊಸ ಅಡಿಕೆ ಮಾರುಕಟ್ಟೆ ಏರುಗತಿಯಲ್ಲಿದೆ.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…