ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಕಳೆದ ಸೋಮವಾರದ ನಂತರ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬಂದಿದೆ. ಆದರೆ ಹೊಸ ಅಡಿಕೆಗೆ ಮಾತ್ರಾ ಸದ್ಯ ಬೇಡಿಕೆಯ ಲಕ್ಷಣಗಳು ಇವೆ. ಚಾಲಿ ಅಡಿಕೆಯಲ್ಲಿ ಹಳೆ ಅಡಿಕೆ ಹಾಗೂ ಹೊಸ ಅಡಿಕೆಯ ನಡುವೆ ಹೆಚ್ಚಿನ ವ್ಯತ್ಯಾಸ ಇದ್ದು, ಈ ಅಂತರ ಕಡಿಮೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ತಡೆಯಾಗಿದ್ದು 1.06 ಕೋಟಿ ಮೌಲ್ಯದ ಅಡಿಕೆಯಲ್ಲಿ ಅಸ್ಸಾಂ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ವಶಕ್ಕೆ ಪಡೆದಿದ್ದಾರೆ.
ಕಳ್ಳ ದಾರಿಯ ಮೂಲಕ ಸುಮಾರು 1012 ಚೀಲ ಅಡಿಕೆಯನ್ನು ಭಾರತದೊಳಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು. ಈ ಸಂದರ್ಭ ಅಸ್ಸಾಂ ರೈಪಲ್ಸ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ತನಿಖೆಯನ್ನು ಮುಂದುವರಿಸಿದ್ದಾರೆ.
ಭಾರತದಲ್ಲಿ ಅಡಿಕೆಯ ಕೊರತೆ ಇದ್ದರೂ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಳ್ಳಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಯ ಕೊರತೆ ಹಾಗೂ ಅಡಿಕೆ ದಾಸ್ತಾನಿನಲ್ಲೂ ವ್ಯತ್ಯಾಸ ಇರುವುದರಿಂದ ಧಾರಣೆಯಲ್ಲಿ ಇಳಿಕೆಯಾಗಿಲ್ಲ. ಇದೀಗ ಅಡಿಕೆ ದಾಸ್ತಾನು ಕಡೆಗೆ ಅಡಿಕೆ ವ್ಯಾಪಾರಿಗಳು ಮನಸ್ಸು ಮಾಡಿದ್ದು, ಈಗ ಹೊಸ ಅಡಿಕೆ ದಾಸ್ತಾನು ಮಾಡಲುವ ಮೂಲಕ ಮುಂದಿನ ಎರಡು ತಿಂಗಳಲ್ಲಿ ಹಳೆ ಅಡಿಕೆ ಧಾರಣೆಗೆ ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ ಎನ್ನುವುದು ಮಾರುಕಟ್ಟೆ ಮಾಹಿತಿ. ಸದ್ಯ ಹೊಸ ಅಡಿಕೆ ಮಾರುಕಟ್ಟೆ ಏರುಗತಿಯಲ್ಲಿದೆ.
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…