ಅಡಿಕೆ ಮಾರುಕಟ್ಟೆಯಲ್ಲಿ ಮತ್ತೆ ಚೇತರಿಕೆ ಕಂಡುಬಂದಿದೆ. ಕಳೆದ ಸೋಮವಾರದ ನಂತರ ಮಾರುಕಟ್ಟೆಯಲ್ಲಿ ಉತ್ಸಾಹ ಕಂಡುಬಂದಿದೆ. ಆದರೆ ಹೊಸ ಅಡಿಕೆಗೆ ಮಾತ್ರಾ ಸದ್ಯ ಬೇಡಿಕೆಯ ಲಕ್ಷಣಗಳು ಇವೆ. ಚಾಲಿ ಅಡಿಕೆಯಲ್ಲಿ ಹಳೆ ಅಡಿಕೆ ಹಾಗೂ ಹೊಸ ಅಡಿಕೆಯ ನಡುವೆ ಹೆಚ್ಚಿನ ವ್ಯತ್ಯಾಸ ಇದ್ದು, ಈ ಅಂತರ ಕಡಿಮೆಯಾಗುವ ಸಾಧ್ಯತೆ ಇದೆ. ಈ ನಡುವೆಯೇ ಅಡಿಕೆ ಆಮದು ಪ್ರಯತ್ನ ನಡೆಯುತ್ತಿದೆ. ಇದೀಗ ಅಕ್ರಮ ಅಡಿಕೆ ತಡೆಯಾಗಿದ್ದು 1.06 ಕೋಟಿ ಮೌಲ್ಯದ ಅಡಿಕೆಯಲ್ಲಿ ಅಸ್ಸಾಂ ಗಡಿಯಲ್ಲಿ ಅಸ್ಸಾಂ ರೈಫಲ್ಸ್ ವಶಕ್ಕೆ ಪಡೆದಿದ್ದಾರೆ.
ಕಳ್ಳ ದಾರಿಯ ಮೂಲಕ ಸುಮಾರು 1012 ಚೀಲ ಅಡಿಕೆಯನ್ನು ಭಾರತದೊಳಕ್ಕೆ ತರುವ ಪ್ರಯತ್ನ ನಡೆಯುತ್ತಿತ್ತು. ಈ ಸಂದರ್ಭ ಅಸ್ಸಾಂ ರೈಪಲ್ಸ್ ಅಡಿಕೆಯನ್ನು ವಶಪಡಿಸಿಕೊಂಡಿದೆ. ತನಿಖೆಯನ್ನು ಮುಂದುವರಿಸಿದ್ದಾರೆ.
ಭಾರತದಲ್ಲಿ ಅಡಿಕೆಯ ಕೊರತೆ ಇದ್ದರೂ ಮಾರುಕಟ್ಟೆ ಸ್ಥಿರತೆಯನ್ನು ಕಾಯ್ದುಕೊಳ್ಳಲಾಗುತ್ತಿದೆ. ಕಳೆದ ಎರಡು ವರ್ಷಗಳಿಂದ ಅಡಿಕೆಯ ಕೊರತೆ ಹಾಗೂ ಅಡಿಕೆ ದಾಸ್ತಾನಿನಲ್ಲೂ ವ್ಯತ್ಯಾಸ ಇರುವುದರಿಂದ ಧಾರಣೆಯಲ್ಲಿ ಇಳಿಕೆಯಾಗಿಲ್ಲ. ಇದೀಗ ಅಡಿಕೆ ದಾಸ್ತಾನು ಕಡೆಗೆ ಅಡಿಕೆ ವ್ಯಾಪಾರಿಗಳು ಮನಸ್ಸು ಮಾಡಿದ್ದು, ಈಗ ಹೊಸ ಅಡಿಕೆ ದಾಸ್ತಾನು ಮಾಡಲುವ ಮೂಲಕ ಮುಂದಿನ ಎರಡು ತಿಂಗಳಲ್ಲಿ ಹಳೆ ಅಡಿಕೆ ಧಾರಣೆಗೆ ಮಾರಾಟ ಮಾಡುವ ಉದ್ದೇಶ ಹೊಂದಲಾಗಿದೆ ಎನ್ನುವುದು ಮಾರುಕಟ್ಟೆ ಮಾಹಿತಿ. ಸದ್ಯ ಹೊಸ ಅಡಿಕೆ ಮಾರುಕಟ್ಟೆ ಏರುಗತಿಯಲ್ಲಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…